ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ರೈತರಿಂದ ಧರಣಿ

ರೈತ ಸಂಘ ಹಾಗೂ ಅರಿಶಿಣ ಬೆಳೆಗಾರರ ಒಕ್ಕೂಟದ ವತಿಯಿಂದ ಗುಂಡ್ಲುಪೇಟೆ ಎಪಿಎಂಸಿ ಆವರಣದಲ್ಲಿ ರೈತರು ಧರಣಿ ನಡೆಸುತ್ತಿದ್ದು  ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.  

Written by - Yashaswini V | Last Updated : Sep 12, 2023, 11:59 AM IST
  • ಗುಂಡ್ಲುಪೇಟೆ ತಾಲೂಕಿನಲ್ಲಿ 15 ಸಾವಿರ ಹೆಕ್ಟೇರ್ ನಲ್ಲಿ ರೈತರು ಸೂರ್ಯಕಾಂತಿ ಬೆಳೆದಿದ್ದಾರೆ
  • ಇದೀಗ ಬೆಲೆ ಕುಸಿತದಿಂದ ರೈತರು ನಷ್ಟ ಅನುಭವಿಸುವಂತಾಗಿದೆ.
  • ಮಳೆ ಕೊರತೆಯಿಂದ ಇಳುವರಿ ಕಡಿಮೆಯಾದ ಹಿನ್ನೆಲೆ ಹಾಕಿದ ಬಂಡವಾಳವೂ ಕೈಸೇರಿಲ್ಲ.
ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ರೈತರಿಂದ ಧರಣಿ  title=

ಚಾಮರಾಜನಗರ: ಸೂರ್ಯಕಾಂತಿ ಧಾರಣೆಯಲ್ಲಿ ಕುಸಿತ ಕಂಡು ರೈತರು ಕೈ ಸುಟ್ಟುಕೊಳ್ಳುತ್ತಿರುವುದರಿಂದ ಖರೀದಿ ಕೇಂದ್ರ ತೆರೆಯಬೇಕೆಂದು ಒತ್ತಾಯಿಸಿ ಗುಂಡ್ಲುಪೇಟೆಯಲ್ಲಿ ರೈತರು ಧರಣಿ ನಡೆಸುತ್ತಿದ್ದಾರೆ.

ರೈತ ಸಂಘ ಹಾಗೂ ಅರಿಶಿಣ ಬೆಳೆಗಾರರ ಒಕ್ಕೂಟದ ವತಿಯಿಂದ ಗುಂಡ್ಲುಪೇಟೆ ಎಪಿಎಂಸಿ ಆವರಣದಲ್ಲಿ ರೈತರು ಧರಣಿ ನಡೆಸುತ್ತಿದ್ದು  ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ- ಬಟ್ಟೆ ಬದಲಿಸುವಂತೆ ಮಹಿಳೆಯರನ್ನ ಬದಲಿಸುತ್ತಾನೆ : ಇನ್ಸ್‌ಪೆಕ್ಟರ್ ವಿರುದ್ಧ ಪತ್ನಿ ದೂರು

ಗುಂಡ್ಲುಪೇಟೆ ತಾಲೂಕಿನಲ್ಲಿ 15 ಸಾವಿರ ಹೆಕ್ಟೇರ್ ನಲ್ಲಿ ಸೂರ್ಯಕಾಂತಿ ಬೆಳೆದಿದ್ದು, ಬೆಲೆ ಕುಸಿತದಿಂದ ನಷ್ಟ ಅನುಭವಿಸುವಂತಾಗಿದೆ. ಮಳೆ ಕೊರತೆಯಿಂದ ಇಳುವರಿ ಕಡಿಮೆಯಾದ ಹಿನ್ನೆಲೆ ಹಾಕಿದ ಬಂಡವಾಳವೂ ಕೈಸೇರಿಲ್ಲ. ಸೂರ್ಯಕಾಂತಿಗೆ ಎಂಎಸ್‍ಪಿ ಅಡಿ 6760 ರೂ. ನಿಗಧಿ ಮಾಡಿತ್ತು. ಆದರೆ ದಲ್ಲಾಳಿಗಳಿಗೆ ರೈತರು 4500 ರೂ.ಗೆ ಮಾರಾಟ ಮಾಡುವ ಮೂಲಕ ಸಾಲದ ಸುಳಿಗೆ ಸಿಲುಕುವಂತಾಯಿತು. ಈ ಮಧ್ಯೆ ಸೂರ್ಯಕಾಂತಿ ಬೆಲೆ ಕುಸಿದಿದ್ದರೂ ಸಹ ಸರ್ಕಾರ ಮಧ್ಯೆ ಪ್ರವೇಶ ಮಾಡಿ ಬೆಂಬಲ ಬೆಲೆ ಅಡಿಯಲ್ಲಿ ಬೆಳೆ ಖರೀದಿಸದೆ ರೈತರಿಗೆ ಅನ್ಯಾಯ ಮಾಡಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. 

ಇದನ್ನೂ ಓದಿ- ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಅದನ್ನು ಯಾರು ಸೃಷ್ಟಿಸಿದವರು..? : ಗೃಹ ಸಚಿವರ ಪ್ರಶ್ನೆ

ಜೂನ್‍ನಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭಿಸಿದರೆ ರೈತರಿಗೆ ನೆರವಾಗುತ್ತಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಖರೀದಿ ಕೇಂದ್ರ ಆರಂಭವಾಗದೆ ಹೆಚ್ಚಿನ ನಷ್ಟವಾಗಿದೆ. ಈಗಾಗಲೇ ಶೇ.85ರಷ್ಟು ಫಸಲು ಮಾರಾಟ ಮಾಡಲಾಗಿದ್ದು, ಕೆಲವು ಪ್ರದೇಶದಲ್ಲಿ ಅಲ್ಪ ಪ್ರಮಾಣದ ಬೆಳೆ ಮಾತ್ರ ಬಾಕಿ ಉಳಿದಿದೆ. ಹೀಗಿದ್ದರು ಕೂಡ ಖರೀದಿ ಕೇಂದ್ರ ತೆರೆಯಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ರೈತರು ಅಸಮಾಧಾನ ಹೊರಹಾಕಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News