ಬೆಳೆದ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಟಾಸ್ಕ್ ! ಹಸಿ ಮೆಣಸಿನಕಾಯಿ ಹೊಲಕ್ಕೆ ಸಿಸಿ ಕ್ಯಾಮರಾ ಕಣ್ಗಾವಲು

CC Camera Security for Chillies : ಮೆಣಸಿನ ಕಾಯಿಗೆ ಬೆಲೆ  ಜಾಸ್ತಿಯಾಗುತ್ತಿದ್ದಂತೆ ರೈತರ ಮೊಗದಲ್ಲಿ ಮಂದಹಾಸ ಮೂಡುವುದರೊಂದಿಗೆ ಆತಂಕ ಕೂಡಾ ಕಾಡುತ್ತಿದೆ.

Written by - Ranjitha R K | Last Updated : Jan 30, 2024, 02:01 PM IST
  • ಕೆಲವೊಂದು ಸಮಯದಲ್ಲಿ ಕೆಲವು ತರಕಾರಿಗಳ ಬೆಲೆ ಗಗನಕ್ಕೆ ಏರುತ್ತದೆ.
  • ಇಳುವರಿ ಅಧಿಕವಾದಾಗ ತರಕಾರಿಯ ಬೆಲೆ ಕೂಡಾ ಕಡಿಮೆಯಾಗುತ್ತದೆ.
  • ಇದೀಗ ಮಾರುಕಟ್ಟೆಯಲ್ಲಿ ಹಸಿ ಮೆಣಸಿನ ಕಾಯಿಯ ಬೆಲೆ ಏರಿದೆ.
ಬೆಳೆದ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಟಾಸ್ಕ್ ! ಹಸಿ ಮೆಣಸಿನಕಾಯಿ ಹೊಲಕ್ಕೆ ಸಿಸಿ ಕ್ಯಾಮರಾ ಕಣ್ಗಾವಲು title=

ಹುಬ್ಬಳ್ಳಿ : ಕೆಲವೊಂದು ಸಮಯದಲ್ಲಿ ಕೆಲವು ತರಕಾರಿಗಳ ಬೆಲೆ ಗಗನಕ್ಕೆ ಏರುತ್ತದೆ. ಇನ್ನು ಕೆಲವು ಸಮಯದಲ್ಲಿ ಆ ತರಕಾರಿಗಳನ್ನು ಕೇಳುವವರೆ ಇರುವುದಿಲ್ಲ. ಇಳುವರಿ ಅಧಿಕವಾದಾಗ ತರಕಾರಿಯ ಬೆಲೆ ಕೂಡಾ ಕಡಿಮೆಯಾಗುತ್ತದೆ. ಇಳುವರಿ ಕಡಿಮೆಯಾಗಿ ಬೇಡಿಕೆ ಜಾಸ್ತಿಯಾದಾಗ ಆ ವಸ್ತುವಿನ ಬೆಲೆ ಕೂಡಾ ಜಾಸ್ತಿಯಾಗುತ್ತದೆ. ಇದೀಗ ಮಾರುಕಟ್ಟೆಯಲ್ಲಿ ಹಸಿ ಮೆಣಸಿನ ಕಾಯಿಯ ಬೆಲೆ ಏರಿದೆ. ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಮೆಣಸಿನಕಾಯಿಗೆ 80 ರಿಂದ 90 ಸಾವಿರ ರೂ ಇದೆ. ಮೆಣಸಿನ ಕಾಯಿಗೆ ಬೆಲೆ  ಜಾಸ್ತಿಯಾಗುತ್ತಿದ್ದಂತೆ ರೈತರ ಮೊಗದಲ್ಲಿ ಮಂದಹಾಸ ಮೂಡುವುದರೊಂದಿಗೆ ಆತಂಕ ಕೂಡಾ ಕಾಡುತ್ತಿದೆ. 

ಬೆಳೆದ ಬೆಳೆಗೆ ಸಿಸಿ ಟಿವಿ ಕಣ್ಗಾವಲು : 
ಈ ಹಿಂದೆ ಟೊಮೇಟೊ, ಈರುಳ್ಳಿ ಬೆಲೆ ಗಗನಕ್ಕೇರಿದಾಗ ಈ ಬೆಳೆಗಳಿಗೆ ಕಳ್ಳ ಕಾಕರ ಭಯ ಕೂಡಾ ಆವರಿಸಿತ್ತು. ಖದೀಮರು ಕತ್ತಲಾಗುವುದಕ್ಕಾಗಿಯೇ ಕಾದು ಬೆಳೆಯನ್ನು ಕದ್ದು ಪರಾರಿಯಾಗುತ್ತಿದ್ದರು. ಹೀಗಾಗಿ ರೈತರು ತಮ್ಮ ಜಮೀನಿಗೆ ಸಿಸಿ ಕ್ಯಾಮೆರಾ ಅಳವಡಿಸುತ್ತಿದ್ದರು.ಅದೇ ರೀತಿ ಇದೀಗ ಮೆಣಿಸಿನಕಾಯಿ ಬೆಳೆಗೆ ಕಳ್ಳರ ಕಾಟ ಹೆಚ್ಚಾಗಿದೆ. ಕಷ್ಟಪಟ್ಟು ಬೆಳೆದ  ಬೆಳೆಯನ್ನು ಕಾಪಾಡಿಕೊಳ್ಳುವುದೇ ರೈತರಿಗೆ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಜಮೀನಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದಾರೆ.

ಇದನ್ನೂ ಓದಿ : ಹನುಮಧ್ವಜ ತೆರೆವು ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

ಮೆಣಸಿನ ಕಾಯಿಗೆ ಕಳ್ಳರ ಕಾಟ :
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ‌ ಹಿರೇನರ್ತಿ ಗ್ರಾಮದ ರೈತ ತಾನು ಬೆಳೆದ ಮೆಣಸಿನಕಾಯಿ ಬೆಳೆಯನ್ನು ಕಳ್ಳರಿಂದ ಕಾಪಾಡಿಕೊಳ್ಳಲು ಜಮೀನಿಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದಾರೆ. ಮೆಣಿಸಿನಕಾಯಿ ಬೆಳೆಗೆ ಕಳ್ಳರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಶಿವಪುತ್ರಪ್ಪ ದ್ಯಾಮಣ್ಣವರ ಅವರು ಬೆಳೆಗೆ ಸಿಸಿ ಕ್ಯಾಮೆರಾದ ಮೂಲಕ ನಿಗಾ ಇಟ್ಟಿದ್ದಾರೆ.  ಸೋಲಾರ್ ಮೂಲಕ ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದಾರೆ.

ಮೆಣಸಿನಕಾಯಿಗೆ 80 ರಿಂದ 90 ಸಾವಿರ ರೂ  ಬೆಲೆ : 
ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಮೆಣಸಿನಕಾಯಿಗೆ 80 ರಿಂದ 90 ಸಾವಿರ ರೂ ಇದೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡುವವರ ಸಂಖ್ಯೆ ಕೂಡಾ ಜಾಸ್ತಿಯಾಗುತ್ತಿದೆ. ಶಿವಪುತ್ರಪ್ಪ ಅವರು ಐದು ಎಕರೆಯಲ್ಲಿ ಮೆಣಸಿನಕಾಯಿ ಬೆಳದಿದ್ದಾರೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡಬಾರದು ಅನ್ನೋ ಉದ್ದೇಶಕ್ಕೆ ಸಿಸಿ ಕ್ಯಾಮೆರಾ ಅಳವಡಿಸಿದ್ದಾರೆ.

ಇದನ್ನೂ ಓದಿ :ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಒಟ್ಟಿನಲ್ಲಿ ಬೆಳೆ ಕೈಗೆ ಬಾರದಿದ್ದರೆ ರೈತರಿಗೆ ಒಂದು ರೀತಿಯ ನಷ್ಟವಾದರೆ, ಬೆಳೆ ಚೆನ್ನಾಗಿ ಬಂದರೂ ರೈತರ ತಲೆ ನೋವು ಮಾತ್ರ ಕಡಿಮೆಯಾಗುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News