ಮಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 62 ಲಕ್ಷ ರೂ. ಸ್ವಾಧೀನಪಡಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಸೇರಿದಂತೆ ಒಟ್ಟು ಆರು ಮಂದಿ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


COMMERCIAL BREAK
SCROLL TO CONTINUE READING

ಉದಯ್‌ ಹೆಗ್ಡೆ, ಸುಧಾಕರ ಶೆಟ್ಟಿ ಮುಗರೋಡಿ, ವರುಣ್‌, ಪ್ರೀತೇಶ್‌ ದೇವಾಡಿಗ, ಡೆಂಜಿಲ್‌ ಹರ್ಮಾನ್‌ ಮತ್ತು ರಮಾನಾಥ ರೈ ವಿರುದ್ಧ ಪ್ರಕರಣ ದಾಖಲುಗೊಂಡಿದೆ. 


ಜಿಲ್ಲಾಧಿಕಾರಿ ಸೂಚನೆಯಂತೆ ಬಂಟ್ವಾಳ ತಹಶೀಲ್ದಾರ್‌ ಈ ಕುರಿತು ಎಸಿಜೆ ಮತ್ತು ಜೆಎಂಎಫ್‌ಸಿ ಬಂಟ್ವಾಳ ನ್ಯಾಯಾಲಯದ ಅನುಮತಿ ಪಡೆದು ಬಂಟ್ವಾಳ ನಗರ ಪೊಲೀಸ್‌ ಠಾಣೆಗೆ ಮಂಗಳವಾರ ಸಂಜೆ ದೂರು ನೀಡಿದ್ದು, ಅದರಂತೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್‌ ತಿಳಿಸಿದ್ದಾರೆ.