ದೇವನಹಳ್ಳಿ : ಬೆಳ್ಳಂ ಬೆಳಿಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಕಾರಣ ಗ್ಯಾಸ್ ಮತ್ತು ಕೇಬಲ್ ಬುಕ್ಕಿಂಗ್ ಕಛೇರಿ ಕಟ್ಟಡ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದ ಬಸ್ ನಿಲ್ದಾಣದಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಇಂದು ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಜುಶ್ರೀ ಗ್ಯಾಸ್ ಮತ್ತು ಕೇಬಲ್ ಬುಕ್ಕಿಂಗ್(Manjushree Gas and Cable Booking) ಕಛೇರಿ ಹೊತ್ತಿ ಉರಿದಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡದ ಸಂಭವಿಸಿರುವ ಶಂಕೆ ಇದೆ. 


ರಣಾಂಗಣವಾದ ಗ್ರಾಮ ಪಂಚಾಯತಿ; ಗ್ರಾಪಂ ಸದಸ್ಯನಿಗೆ ಪಿಡಿಓ ಹಲ್ಲೆ..!


ಸ್ಥಳಕ್ಕೆ ಅಗ್ನಿಶಾಮಕ ದಳ(Fire Department)ದ ಸಿಬ್ಬಂದಿ  ತಡವಾಗಿ ಆಗಮಿಸಿದ ಹಿನ್ನೆಲೆ ಕಛೇರಿಯಲ್ಲಿದ್ದ ಪೀಠೋಪಕರಣ ಸುಟ್ಟು ಭಸ್ಮವಾಗಿವೆ ಎಂದು ಆರೋಪ ಕೇಳಿ ಬಂದಿದೆ. ಈ ಕುರಿತು ಚನ್ನರಾಯಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.