ಕೊಡಗಿನ ಜನರ ನಿದ್ದೆಗೆಡಿಸಿದ್ದ ಪುಂಡಾನೆ ಸೆರೆ

ಕೊಡಗು ಜಿಲ್ಲೆಯ  ಸಿದ್ದಾಪುರ ಭಾಗದಲ್ಲಿ  ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಮನುಷ್ಯರ ಮೇಲೆ ದಾಳಿ ಮಾಡಿ ಕೃಷಿ ಫಸಲುಗಳನ್ನು ತಿಂದು, ತುಳಿದು ನಾಶ ಮಾಡಿ ಬೆಳೆಗಾರರು, ಕಾರ್ಮಿಕರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. 

Written by - Yashaswini V | Last Updated : Jun 26, 2023, 02:28 PM IST
  • ಈ ಪುಂಡಾನೆ ಕಳೆದ ಹಲವು ತಿಂಗಳುಗಳಿಂದ ಈ ಭಾಗದಲ್ಲಿ ಕೃಷಿ ಭೂಮಿಯ ಮೇಲೆ ದಾಳಿ ನಡೆಸಿ, ಬೆಳೆಗಳನ್ನು ನಾಶಪಡಿಸಿತ್ತು.
  • ಸ್ಥಳೀಯರಲ್ಲಿ ಭಯದಲ್ಲಿ ಜೀವನ‌ ಮಾಡುವಂತಾಗಿತ್ತು.
  • ದಾಂದಲೆ ಮಾಡುತ್ತಿದ್ದ ಕಾಡಾನೆಯನ್ನು ಸೆರೆ ಹಿಡಿಯಲು ಮುಂಜಾನೆಯ ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿ
ಕೊಡಗಿನ ಜನರ ನಿದ್ದೆಗೆಡಿಸಿದ್ದ ಪುಂಡಾನೆ ಸೆರೆ  title=

ಕೊಡಗು ಜಿಲ್ಲೆಯಲ್ಲಿ ಮನುಷ್ಯರ ಮೇಲೆ ದಾಳಿ ನಡೆಸಿ, ಬೆಳೆಗಳನ್ನು ನಾಶಮಾಡಿ ದಾಂದಲೆ ಮಾಡುತ್ತಿದ್ದ ಪುಂಡಾನೆಯನ್ನು ಸಾಕಾನೆಗಳ ಸಹಾಯದಿಂದ ಆರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಇನ್ನು ಕಾಡಾನೆಗೆ ಎಡೆಮುರಿ ಕಟ್ಟಿದ್ದರಿಂದ ಸುತ್ತಮುತ್ತಲಿನ ಜನರು ನಿಟ್ಟುಸಿರು ಬಿಡುವಂತಾಗಿದೆ. 

ಹೌದು, ಕೊಡಗು ಜಿಲ್ಲೆಯ  ಸಿದ್ದಾಪುರ ಭಾಗದಲ್ಲಿ  ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಮನುಷ್ಯರ ಮೇಲೆ ದಾಳಿ ಮಾಡಿ ಕೃಷಿ ಫಸಲುಗಳನ್ನು ತಿಂದು, ತುಳಿದು ನಾಶ ಮಾಡಿ ಬೆಳೆಗಾರರು, ಕಾರ್ಮಿಕರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. 

ಇದನ್ನೂ ಓದಿ- ನಾಡಿಗೆ ಬಂದ ಒಂಟಿ ಸಲಗ: ಆತಂಕದಲ್ಲಿ ಗ್ರಾಮಸ್ಥರು

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಕಂಡಂಗಾಲ ಗ್ರಾಮದ ಬಳಿ 35 ವರ್ಷದ ಗಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಇಂದು ಸೆರೆ ಹಿಡಿದಿದ್ದಾರೆ. ಕಾಡಾನೆಯನ್ನು ಹಿಡಿದು ರೇಡಿಯೋ ಕಾಲಾರ್ ಅಳವಡಿಸಿ ಬಂಡಿಪುರ ಕಾಡಿಗೆ ಬಿಡಲಾಗಿದೆ. 

ಈ ಪುಂಡಾನೆ ಸಿದ್ದಾಪುರ ಸುತ್ತಮುತ್ತಲಿನ  ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ  ಕಾರ್ಮಿಕರ ಮೇಲೆ ದಾಳಿ ಮಾಡಿತ್ತು. ತಿಂಗಳಲ್ಲಿ ಬೇರೆ ಬೇರೆ ಕಾಫಿ ತೋಟದಲ್ಲಿ ಮೂರು ಜನರ ಮೇಲೆ ದಾಳಿ ಮಾಡಿತ್ತು. ಇದರಿಂದ ಸುತ್ತಲಿನ ಸ್ಥಳೀಯರು ಭಯದಲ್ಲಿ ಜೀವನ ಮಾಡುತ್ತಿದ್ದರು. ಸದ್ಯ ಇದೀಗ ಕಾಡಾನೆ ಸೆರೆಯಿಂದ ಸ್ಥಳೀಯರಲ್ಲಿ ಆತಂಕ‌ ದೂರವಾಗಿದೆ. ಮತ್ತಿಗೋಡು, ದುಬಾರೆ ಶಿಬಿರದ ಐದು ಸಾಕಾನೆಗಳ ಸಹಕಾರದೊಂದಿಗೆ ಸತತ ಎರಡು ದಿನಗಳ ಕಾಲ ಕಾವಡಿ ಮಾವುತರು ಹಾಗೂ 50ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡನೆಯನ್ನು ಸೆರೆ ಹಿಡಿದರು.

ಇದನ್ನೂ ಓದಿ- ಶಕ್ತಿ ಯೋಜನೆ ಹೊಡೆತ: ಆಟೋ ಮಾರಾಟಕ್ಕೆ ನಿಂತ ಆಟೋ ಚಾಲಕರು

ಈ ಪುಂಡಾನೆ ಕಳೆದ ಹಲವು ತಿಂಗಳುಗಳಿಂದ ಈ ಭಾಗದಲ್ಲಿ ಕೃಷಿ ಭೂಮಿಯ ಮೇಲೆ ದಾಳಿ ನಡೆಸಿ, ಬೆಳೆಗಳನ್ನು ನಾಶಪಡಿಸಿತ್ತು. ಸ್ಥಳೀಯರಲ್ಲಿ ಭಯದಲ್ಲಿ ಜೀವನ‌ ಮಾಡುವಂತಾಗಿತ್ತು. ದಾಂದಲೆ ಮಾಡುತ್ತಿದ್ದ ಕಾಡಾನೆಯನ್ನು ಸೆರೆ ಹಿಡಿಯಲು ಮುಂಜಾನೆಯ  ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಅಭಿಮನ್ಯು, ಪ್ರಶಾಂತ, ಹರ್ಷ ಸೇರಿದಂತೆ 4 ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ನಡೆಸಿದ್ದರು. ಬೆಳಗ್ಗೆಯಿಂದ ಕಾರ್ಯಚರಣೆ ನೆಡೆಸಿದ್ದು ಕಾಫಿ ತೋಟದಲ್ಲಿ ಕಾಣಿಸಿಕೊಂಡ ಕಾಡಾನೆಯನ್ನು ಗುರುತ್ತು ಮಾಡಿ ಮಧ್ಯಾಹ್ನದ ವೇಳೆಗೆ ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿಲಾಯಿತು. ನಂತರ ಆನೆ ಸ್ವಲ್ಪ ದೂರ ಓಡಿಹೋಗಿ ಸುಸ್ತಾಗಿ ಕೆಳಗೆ ಬಿದಿತ್ತು. ಬಳಿಕ ಮಾವುತರು ಕಾವಡಿಗಳು ಆರಣ್ಯ ಸಿಬ್ಬಂದಿ ಕಾನೆ ಯಿಂದೆ ಹೋಗಿ ಆನೆ ಮೇಲೆ ನೀರು ಹಾಕಿ ಹಗ್ಗ ಕಟ್ಟಿ ಸಾಕಾನೆಗಳ ಸಹಾಯದಿಂದ  ಸೆರೆ ಹಿಡಿದ್ದಿದ್ದಾರೆ. ನಂತರ ಕ್ರೇನ್ ಮೂಲಕ ಆನೆಯನ್ನು ಮೇಲಕ್ಕೆ ಎತ್ತಿ ಚಿಕಿತ್ಸೆ ನೀಡಿ  ರೇಡಿಯೋ ಕಾಲರ್ ಆಳವಡಿಸಿ ಬಂಡಿಪುರ ಕಾಡಿಗೆ ಬಿಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News