ಬೆಂಗಳೂರು : ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಈ ಘಟನೆ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ, ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್‌ ರಾದ್ಧಾಂತಕ್ಕೆ ಕಾರಣ.


ಇದನ್ನೂ ಓದಿ : Hubli : ಪೊಲೀಸರ ಮೇಲೆ ಕಲ್ಲು ತೂರಾಟ : ಹುಬ್ಬಳ್ಳಿಯಲ್ಲಿ ಸೆಕ್ಷನ್ 144 ಜಾರಿ


ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್‌ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ ಮೇಲೆ ದಾಳಿ, ಠಾಣೆ ಮತ್ತು ಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು.


ಹುಬ್ಬಳ್ಳಿ ಘಟನೆ ಒಂದು ನಿದರ್ಶನ. ಹಿಂದೆ ಬೆಂಗಳೂರಿನಲ್ಲಿ ಕಿಡಿಗೇಡಿ ಯುವಕನೊಬ್ಬ ಒಂದು ಧರ್ಮಗುರುವಿನ ಬಗ್ಗೆ ಪ್ರಚೋದನಾತ್ಮಕ ಪೋಸ್ಟ್‌ ಹಾಕಿದ್ದ ಪರಿಣಾಮ, ಶಾಸಕರೊಬ್ಬರ ಮನೆ, ಡಿಜೆ ಹಳ್ಳಿ ಪೊಲೀಸ್‌ ಠಾಣೆಯೇ ಬೆಂಕಿಗೆ ಆಹುತಿಯಾಗಿತ್ತು.


ಹುಬ್ಬಳ್ಳಿ ಇನ್ನೊಂದು ಡಿಜೆ ಹಳ್ಳಿ ಆಗುವುದನ್ನು ಪರಿಣಾಮಕಾರಿಯಾಗಿ ತಡೆದ ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್‌ ಆಯುಕ್ತರು ಹಾಗೂ ಇಡೀ ಪೊಲೀಸ್‌ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ಸಕಾಲಕ್ಕೆ ಅವರು ಎಚ್ಚೆತ್ತ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.


"ಚುನಾವಣೆ ಗೆಲ್ಲಲು ಮೋದಿ ಮಂತ್ರ ಸಾಲೋದಿಲ್ಲ : ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ"


ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ʼಬ್ರಿಟೀಷ್‌ ನೀತಿʼಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ.
ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಿಂದ ಬರ್ಬರವಾದ ಜನರ ಬದುಕಿನ ಬಗ್ಗೆ ʼಸೋಶಿಯಲ್‌ ಮೀಡಿಯಾ ಶೂರರ ಮೌನ ಅಪಾಯಕಾರಿ.ʼ ಅಲ್ಲದೆ; ರಾಷ್ಟ್ರೀಯ ಪಕ್ಷಗಳ ಕಾಣದ ಕೈಚಳಕ, ಮೌನ ಕುಮ್ಮಕ್ಕು ವಿನಾಶಕಾರಿ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.