ಬೆಂಗಳೂರು: ರಾಜ್ಯದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರ(Womens Relief Centers)ಗಳನ್ನು ಸರ್ಕಾರ ಬಂದ್ ಮಾಡಿರುವುದು ಅಕ್ಷಮ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai)ಯವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯನವರು, ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಲು ಕೈಗೊಂಡಿರುವ ತೀರ್ಮಾನವನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

‘ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೊಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವುದು ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮವಾಗಿದೆ’ ಎಂದು ಸಿದ್ದರಾಮಯ್ಯ(Siddaramaiah) ಅಸಮಾಧಾನ ಹೊರಹಾಕಿದ್ದಾರೆ.


ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸಾವು ಖಚಿತ, ಶವಸಂಸ್ಕಾರ ಉಚಿತ!: ಕಾಂಗ್ರೆಸ್ ವ್ಯಂಗ್ಯ


ಜಾತಿ ಗಣತಿ ವರದಿ ಒಪ್ಪಿಕೊಳ್ಳದ ಬಿಜೆಪಿ ನಾಯಕರಿಂದ ಕುಂಟುನೆಪ: ಸಿದ್ದರಾಮಯ್ಯ


‘ತಕ್ಷಣವೇ ಬಂದ್ ಆಗಿರುವ ಎಲ್ಲಾ ಸಾಂತ್ವನ ಕೇಂದ್ರಗಳನ್ನು ಆರಂಭಿಸಬೇಕು. ಉಳಿದ ಕೇಂದ್ರಗಳನ್ನು ಬಂದ್ ಮಾಡುವ ನಿರ್ಧಾರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು’ ಅಂತಾ ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ(Siddaramaiah) ಅವರು ಮುಖ್ಯಮಂತ್ರಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.