ಚಿಕ್ಕೋಡಿ:  ಕಾಂಗ್ರೆಸ್‌ ಅನೇಕ ಮುಖಂಡರುಗಳು ದಾಖಲೆಗಳಿಲ್ಲದೆ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್‌ನ ಕೆಲ ನಾಯಕರು ಪುರಾವೆ ರಹಿತ ಆರೋಪ ಮಾಡಿ ಗಾಳಿಯಲ್ಲಿ ಗುಂಡುಹಾರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Karnataka PSI Scam: ‘ಆರೋಪಿ ಎಷ್ಟೇ ಪ್ರಭಾವಿ, ಚಾಣಾಕ್ಷನಾಗಿದ್ದರೂ ಹೆಡೆಮುರಿಕಟ್ಟುತ್ತೇವೆ’
 
ಬಿಜೆಪಿ ಸರ್ಕಾರ 50 ಪರ್ಸೆಂಟೇಜ್ ಕಮಿಷನ್ ಪಡೆಯುತ್ತೆ ಎಂಬ  ಸತೀಶ್ ಜಾರಕಿಹೊಳಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸವದಿ, ಇವರ ಹತ್ತಿರ ದಾಖಲೆ, ಪುರಾವೆಗಳಿದ್ದರೆ ಬಿಡುಗಡೆ ಮಾಡಲಿ. ದಾಖಲೆಗಳು ಒಂದು ವೇಳೆ ಸತ್ಯವಾಗಿದ್ದರೆ ಅಂಥವರ ವಿರುದ್ಧ ನಮ್ಮ ಸರ್ಕಾರ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು. 


ಕಾಂಗ್ರೆಸ್ಸಿಗೆ ಮಾತನಾಡಲು ಯಾವುದೇ ವಿಷಯವಿಲ್ಲ. ಹಾಗಾಗಿ ಇಂತಹ ಅಪಪ್ರಚಾರದಿಂದ ಏನಾದರು ಲಾಭ ಸಿಗಬಹುದು ಎಂಬ ಕಲ್ಪನೆಯಿಂದ ಅವರು ಇಂತಹ ಅಪವಾದಗಳನ್ನ ಮಾಡುತ್ತಿದ್ದಾರೆ.  ಈ ರೀತಿಯ ಆರೋಪಗಳೆಲ್ಲ ಸತ್ಯಕ್ಕೆ ದೂರವಾಗಿವೆ ಎಂದು ಹೇಳಿದರು. 


ಇನ್ನೂ ಇದೇ ವೇಳೆ ಪಿಎಸ್ ಐ ನೇಮಕಾತಿ ಅಕ್ರಮದ ಕುರಿತು ಮಾತನಾಡಿದ ಅವರು, ಅಕ್ರಮದ ಕುರಿತು ಮುಖ್ಯಮಂತ್ರಿಗಳಿಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ದೊರೆತ ತಕ್ಷಣ ಪ್ರಕರಣವನ್ನು ಸಿಒಡಿಗೆ ವಹಿಸಲಾಗಿದೆ. ಅಲ್ಲದೆ ಕೆಲವು ಆರೋಪಿಗಳನ್ನ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಎಂತಹ ದೊಡ್ಡ ವ್ಯಕ್ತಿಯಾದರು ಸರಿ ಅವರನ್ನು ಹೆಡೆಮುರಿ ಕಟ್ಟಿ, ಅವರಿಗೆ ತಕ್ಕ ಶಿಕ್ಷೆ ನೀಡುವಂತಹ ಕೆಲಸವನ್ನ ನಮ್ಮ ಮುಖ್ಯಮಂತ್ರಿಗಳು ಮಾಡುತ್ತಾರೆ ಎಂದರು.


ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ನೊಟೀಸ್ ಜಾರಿ: ಸರ್ಕಾರಕ್ಕೆ ಡಿ.ಕೆ. ಶಿವಕುಮಾರ್ ತೀವ್ರ ತರಾಟೆ


ಮುಂಬರುವ ವಿಧಾನಸಭಾ ಚುನಾಚಣೆಯಲ್ಲಿ ತಮ್ಮ ಸ್ಪರ್ಧೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ಭವಿಷ್ಯದ ಬಗೆಗೆ ಮಾತನಾಡಲು ನಾನು ಬಬಲಾದಿ ಅಜ್ಜನೂ ಅಲ್ಲ, ದೈವಾಂಶ ಸಂಭೂತನೂ ಅಲ್ಲ. ಅದು ಭಗವಂತನ ಆಟ. ಆ ಆಟದ ಪ್ರಕಾರ ನಾನು‌ ನಡೆಯುತ್ತೇನೆ ಎಂದು ಮಾರ್ಮಿಕವಾಗಿ ನುಡಿದರು. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.