ಕೊಪ್ಪಳ: ಬಿಜೆಪಿಯವರಿಗೆ ಸ್ವಂತ ಮಕ್ಕಳು ಇಲ್ಲವೆಂದು ಮಾಜಿ ಸಚಿವ ಶಿವರಾಜ್ ತಂಗಡಗಿ ವ್ಯಂಗ್ಯವಾಡಿದ್ದಾರೆ. ಕೊಪ್ಪಳದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮಂಗಳವಾರ ಗುಡುಗಿರುವ ಅವರು, ಆ ಪಕ್ಷದಲ್ಲಿ ಇರೋವವರೆಲ್ಲ ಬಾಡಿಗೆ ಮಕ್ಕಳು’ ಎಂದು ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

ಬಾಡಿಗೆ ಮಕ್ಕಳನ್ನು ಕರೆದುಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಿದೆ ಎಂದಿರುವ ತಂಗಡಗಿ, ಪಕ್ಷಾಂತರ ಶಾಸಕರನ್ನು ಬಾಡಿಗೆ ಮಕ್ಕಳಿಗೆ ಹೋಲಿಸಿದ್ದಾರೆ. ಬಿಜೆಪಿಯವರು ಸ್ವಂತ ಮಕ್ಕಳನ್ನು ಹುಟ್ಟಿಸಿದ ಉದಾಹರಣೆ ಎಲ್ಲಿದೆ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ದಲಿತ ಮುಖ್ಯಮಂತ್ರಿ ವಿಚಾರ: ಡಿಕೆಶಿಗೆ ತಿರುಗೇಟು ನೀಡಿದ ಬಿಜೆಪಿ


ಕರ್ನಾಟಕ, ಮಧ್ಯಪ್ರದೇಶದಲ್ಲಿರಾಜ್ಯಗಳಲ್ಲಿ ಕಾಂಗ್ರೆಸ್ ಮಕ್ಕಳನ್ನು ಕರೆದುಕೊಂಡು ಬಿಜೆಪಿ‌ ಸರ್ಕಾರ ಮಾಡಿದೆ. ಹೀಗಾಗಿ ಬಿಜೆಪಿಯವರಿಗೆ ಸ್ವಂತ ಮಕ್ಕಳಿಲ್ಲ.ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬೇರೆ ಪಕ್ಷದಿಂದ ಬಂದು ಸಚಿವರಾದವರು ಸಹ ಬಾಡಿಗೆ ಮಕ್ಕಳು ಎಂದು ತಂಗಡಗಿ ಕುಟುಕಿದ್ದಾರೆ.


ದಲಿತ ಸಿಎಂ ವಿಚಾರವಾಗಿ ಮಾತನಾಡಿರುವ ಅವರು, ದಲಿತರಿಗೆ ಶಕ್ತಿ ನೀಡಿದ್ದು ಕಾಂಗ್ರೆಸ್ ಪಕ್ಷ. ಮುಂದೆಯೂ ಸಹ ದಲಿತರಿಗೆ ಕಾಂಗ್ರೆಸ್ ಸಿಎಂ ಸ್ಥಾನ ನೀಡುತ್ತದೆ. 2023ಕ್ಕೂ ಆಗಬಹುದು ‌ಅಥವಾ ಮುಂದೆಯೂ ಆಗಬಹುದು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಮೇಲೆ ದಾಳಿ ನಡೆಸಲು IT, ED & CBIಗಳಿಗೆ ಭಯವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ