ಬೆಂಗಳೂರು : ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷದ ಮಟ್ಟಿಗೆ ಹಿನ್ನಡೆಯಾದರೂ ಅಂತಿಮವಾಗಿ ಜನಾದೇಶಕ್ಕೆ ಗೌರವ ಕೊಡಲೇಬೇಕು.‌ ಚುನಾವಣೆ ನಡೆದ ಐದೂ ರಾಜ್ಯಗಳಲ್ಲಿ ಪಕ್ಷದ ಪರ ಜನರ ಒಲವಿತ್ತು. ಆದರೆ ಆ ಒಲವು ಪಕ್ಷದ ಪರ ಮತಗಳಾಗಿ ಪರಿವರ್ತನೆಯಾಗಿಲ್ಲ. ಚುನಾವಣೆ ನಡೆದ ರಾಜ್ಯಗಳಲ್ಲಿ ಜನರ ನಾಡಿ ಮಿಡಿತ ನಾವು ಅರಿಯುವಲ್ಲಿ ನಮ್ಮ ಪಕ್ಷ ವಿಫಲವಾಗಿದೆ ಎಂದು ಮಾಜಿ ಕೆಪಿಸಿಸಿ ಮತ್ತು ಗೋವಾ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷ ದಿನೇಶ್ ಗುಂಡು ರಾವ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ದಿನೇಶ್ ಗುಂಡು ರಾವ್(Dinesh Gundu Rao), ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮತದಾರನ ಆದ್ಯತೆ ಏನು? ಯಾವುದಕ್ಕೆ ಪ್ರಾಶಸ್ತ್ಯ? ಎಂದು ತೋರಿಸಿಕೊಟ್ಟಿದೆ. ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ, ದುಬಾರಿ ಜೀವನ, ರೈತರ ಶೋಷಣೆ ಚುನಾವಣೆಯ ವಸ್ತು ವಿಷಯ ಎಂದು ಭಾವಿಸಲಾಗಿತ್ತು. ಆದರೆ ಜನರಿಗೆ ಈ ವಿಷಯಗಳಿಗಿಂತ ಕೋಮು ಸಂಗತಿಗಳೇ ಆದ್ಯತೆಯಾದಂತಿದೆ. ಈ ಫಲಿತಾಂಶ ಅಪಾಯಕಾರಿ ಬೆಳವಣಿಗೆಯ ಅಪಶಕುನವಿದ್ದಂತೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.