ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಆಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಮಂಗಳೂರಿನಿಂದ ಕಾರವಾರ ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ. ಅಲ್ಲದೆ, ಮುಂದಿನ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಕಾರಣದಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. 


ಇದನ್ನೂ ಓದಿ : R Ashok : ಅಗ್ನಿಪತ್ ಕುರಿತು ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಆರ್ ಅಶೋಕ್


ಗುಡುಗು- ಮುಂಚು ಸಹಿತ 115 ಮಿಮಿ ನಿಂದ 204 ಮಿ.ಮೀ ವರೆಗೂ ಅತಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಜುಲೈ 28, 29 ರಂದು ಮಳೆ ಪ್ರಮಾಣದಲ್ಲಿ ಸ್ವಲ್ಪ ಕಡಿಮೆಯಾಗಲಿದೆ.


ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ (64.5 ಮಿ.ಮೀ - 115 ಮಿಮಿ) ಆಗುವ ಸಾಧ್ಯತೆ ಇದೆ. ಹೀಗಾಗಿ,  ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿಗೆ ಮುಂದಿನ 4 ದಿನ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 


ಇದನ್ನೂ ಓದಿ : 'ಅವರ ಮಕ್ಕಳು ಮಾತ್ರ ವೈದ್ಯರು, ಇಂಜಿನಿಯರ್ ಆಗಬೇಕು, ಬಡವರ ಮಕ್ಕಳು ಸೆಕ್ಯೂರಿಟಿ ಗಾರ್ಡ್ ಆಗಬೇಕಾ?'


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.