ಬಸ್‍ಗೆ ಆಟೋ ಡಿಕ್ಕಿ; ನಾಲ್ವರ ದುರ್ಮರಣ

ಆಟೋದಲ್ಲಿ ಸುಮಾರು 10 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. 

Last Updated : Jun 17, 2019, 01:59 PM IST
ಬಸ್‍ಗೆ ಆಟೋ ಡಿಕ್ಕಿ; ನಾಲ್ವರ ದುರ್ಮರಣ title=

ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋದ ಆಟೋವೊಂದು ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದ ಬಳಿ ನಡೆದಿದೆ. 

ಆಟೋದಲ್ಲಿ ಸುಮಾರು 10 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. 

ಮೃತರನ್ನು ಹಸೀನಾ, ಸಾನಿಯಾ, ಶಾಜಿಯಾ ಮತ್ತು ಜೊಯಾ ಎಂದು ಗುರುತಿಸಲಾಗಿದ್ದು ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿ ಮೂಲದವರಾಗಿದ್ದು, ಆಧಾರ್ ಕಾರ್ಡ್ ಮಾಡಿಸಲು ಆಟೋದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.

ಸದ್ಯ ಮೃತದೇಹಗಳನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಂಬಂಧಿಕರಿಗೆ ಮೃತದೇಹಗಳನ್ನು ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. 

Trending News