ಹೊಸದುರ್ಗ: ಕ್ರೂಸರ್ ಮತ್ತು ಕಾರಿನ ನಡುವೆ ಭಾನುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ದೊಸದುರ್ಗ ತಾಲೂಕಿನ ಕಲ್ಕರೆ ಗ್ರಾಮದ ಬಳಿ ನಡೆದಿದೆ. 


COMMERCIAL BREAK
SCROLL TO CONTINUE READING

ಚಿತ್ರದುರ್ಗದಲ್ಲಿ ಶನಿವಾರ ನಡೆದ ಗಣೇಶೋತ್ಸವದ ಶೋಭಾಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. 


ಹೊಸದುರ್ಗದಿಂದ ಬರುತ್ತಿದ್ದ ಕಾರಿನಲ್ಲಿದ್ದ ಗೌತಮ್ ಸಿಂಗ್, ಮದನ್ ಸಿಂಗ್, ಮುಖೇಶ್ ಸಿಂಗ್ ಮತ್ತು ಕ್ರೂಸರ್ ನಲ್ಲಿದ್ದ  ಅರಸೀಕೆರೆ ಮೂಲದ ಲೋಕೇಶ್ ಮೃತಪಟ್ಟ ದುರ್ದೈವಿಗಳು.


ಉಳಿದಂತೆ ಅಪಘಾತದಲ್ಲಿ ಗಾಯಗೊಂಡ 7 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೊಸದುರ್ಗ ಪೊಲೀಸರು ತಿಳಿಸಿದ್ದಾರೆ.