ಸುರತ್ಕಲ್ ನಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಜುಲೈ 28 ರ ಗುರುವಾರ ಸಂಜೆ ಸುರತ್ಕಲ್‌ನ ಜವಳಿ ಅಂಗಡಿಯೊಂದರ ಹೊರಗೆ ಯುವಕನನ್ನು ಹಿಂಬಾಲಿಸಿ ನಾಲ್ವರು ದುಷ್ಕರ್ಮಿಗಳು ಬರ್ಬರವಾಗಿ ಇರಿದು ಹತ್ಯೆಗೈದಿದ್ದಾರೆ.

Written by - Zee Kannada News Desk | Last Updated : Jul 28, 2022, 11:59 PM IST
  • ಜುಲೈ 27ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯಾದ ಬೆನ್ನಲ್ಲೇ ಈ ಕೊಲೆ ನಡೆದಿದೆ.
ಸುರತ್ಕಲ್ ನಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ  title=

ಮಂಗಳೂರು: ಜುಲೈ 28 ರ ಗುರುವಾರ ಸಂಜೆ ಸುರತ್ಕಲ್‌ನ ಜವಳಿ ಅಂಗಡಿಯೊಂದರ ಹೊರಗೆ ಯುವಕನನ್ನು ಹಿಂಬಾಲಿಸಿ ನಾಲ್ವರು ದುಷ್ಕರ್ಮಿಗಳು ಬರ್ಬರವಾಗಿ ಇರಿದು ಹತ್ಯೆಗೈದಿದ್ದಾರೆ.

ನಿನ್ನೆ ಬಿಜೆಪಿ ಯುವ ಮುಖಂಡನ ಕೊಲೆಯಾದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲೆಗೆ ಭೇಟಿ ನೀಡಿರುವ ಸಂದರ್ಭದಲ್ಲೇ ಮತ್ತೊಂದು ದುರ್ಘಟನೆ ನಡೆದಿದೆ.ಸುರತ್ಕಲ್‌ನ ಮಂಗಲ್‌ಪೇಟೆ ನಿವಾಸಿ ಮೃತ ಫಾಜಿಲ್‌ ಎಂಬಾತ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ: Vikrant Rona Movie Review: ‘ವಿಕ್ರಾಂತ್ ರೋಣ’ ಸಿನಿಮಾ ರಿವ್ಯೂ ಔಟ್..!‌ ಜಗತ್ತಿನಾದ್ಯಂತ ಕಿಚ್ಚನ ಸುನಾಮಿ..

ಜುಲೈ 27ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯಾದ ಬೆನ್ನಲ್ಲೇ ಈ ಕೊಲೆ ನಡೆದಿದೆ.

ಪರಿಚಿತರೊಬ್ಬರ ಜತೆ ಮಾತನಾಡುತ್ತಿದ್ದ ಫಾಝಿಲ್ ಅವರನ್ನು ಹಿಂಬಾಲಿಸಿ ಬಂದ ಗ್ಯಾಂಗ್ ಆತನನ್ನು ಹಿಡಿದು ಅಮಾನುಷವಾಗಿ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದೆ.ಇದುವರೆಗೆ ದಾಳಿಯ ಹಿಂದಿನ ಉದ್ದೇಶ ಇನ್ನೂ ಸಂಪೂರ್ಣವಾಗಿ ತಿಳಿದಿಲ್ಲ ಎನ್ನಲಾಗಿದೆ.

ಈ ಬೆನ್ನಲ್ಲೇ ಮಂಗಳೂರಿನ ಬಜ್ಪೆ, ಪಣಂಬೂರು, ಮುಲ್ಕಿ, ಸುರತ್ಕಲ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್‌ ಕಮಿಷನರ್‌ ಆದೇಶ ಹೊರಡಡಿಸಿದ್ದಾರೆ. “ಫಾಜಿಲ್ ಕೊಲೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ತನಿಖೆ ಬಳಿಕವೇ ಫಾಜಿಲ್ ಹತ್ಯೆಗೆ ಕಾರಣ ತಿಳಿದು ಬರಲಿದೆ” ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News