ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹುಲಿತೊಟ್ಲು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗದ ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


COMMERCIAL BREAK
SCROLL TO CONTINUE READING

ಕಳೆದ ರಾತ್ರಿ ಹುಲಿತೊಟ್ಲು ಗ್ರಾಮದ ಏಳು ಮಂದಿ ವಿಷಾಹಾರ ಸೇವಿಸಿದ್ದು, ಅಸ್ವಸ್ಥಗೊಂಡ ಇವರುಗಳನ್ನು ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.


ಚಿಕಿತ್ಸೆ ಫಲಕಾರಿಯಾಗದೆ ಚಿತ್ತಪ್ಪ, ಶಶಿಧರ್‌ ,ಭಾಗ್ಯಮ್ಮ ಮತ್ತು ಶಶಿಧರ್‌ ಎನ್ನುವವರು ಸಾವನ್ನಪ್ಪಿದ್ದು, ಗಂಭೀರ ಸ್ಥಿತಿಯಲ್ಲಿರುವ ಮುತ್ತುರಾಜ್‌ (14), ಸದಾನಂದ (13)ಮತ್ತು ಅಜಯ್‌ ಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.