Bellary Fraud Case: ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಅಂತಾ ಹೇಳಿಕೊಂಡು 8 ಮದುವೆ ಆಗಿದ್ದೂ ಅಲ್ಲದೇ ಸಾಲ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚಿಸಿದ್ದ ಖತರ್ನಾಕ್ ಲೇಡಿ ಸಿಕ್ಕಿಬಿದ್ದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್ (40) 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆಂದು ತಿಳಿದು ಬಂದಿದೆ.


COMMERCIAL BREAK
SCROLL TO CONTINUE READING

ಮದುವೆಯಾಗಿ ಹೆಂಡತಿಯಿಂದ ಅಂತರ ಕಾಯ್ದುಕೊಂಡ ದುಡ್ಡಿದ್ದ ಗಂಡಸರೇ ತಬುಸುಮ್‌ನ ಟಾರ್ಗೆಟ್ ಆಗಿದ್ದರು. ಹೀನಾ ಎಂಟರ್‌ಪ್ರೈಸಸ್ ಹೆಸರಲ್ಲಿ ಕಚೇರಿ ತೆರೆದು ಮುದ್ರಾ ಲೋನ್, ಸರ್ಕಾರಿ ನೌಕರಿ, ಮೈನಾರಿಟಿ ಲೋನ್ ಮತ್ತು ವಿದ್ಯಾರ್ಥಿಗಳಿಗೆ ಸ್ಕಾಲರ್‍ಶಿಪ್ ಕೊಡಿಸುತ್ತೇನೆಂದು ಜನರನ್ನು ನಂಬಿಸುತ್ತಿದ್ದಳು.


ಇದನ್ನೂ ಓದಿ: ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ


18 ವರ್ಷದಿಂದ ಕಚೇರಿ ನಡೆಸುತ್ತಿದ್ದ ತಬುಸುಮ್ ವಿಧಾನಸಭಾಧಕ್ಷ ಯು.ಟಿ.ಖಾದರ್ ಬಳಿ ಬ್ಲ್ಯಾಕ್ ಮನಿ ಇದೆ. ಅದನ್ನು ವೈಟ್ ಮಾಡಲು ಈ ಬ್ಯುಸಿನೆಸ್ ಮಾಡುತ್ತಿದ್ದೇವೆಂದು ಹೇಳಿಕೊಳ್ಳುತ್ತಿದ್ದಳಂತೆ. ಅದೇ ರೀತಿ 15 ಲಕ್ಷ ರೂ. ಕೊಟ್ಟರೆ 10 ದಿನದಲ್ಲಿ 1 ಕೋಟಿ ರೂ. ಸಾಲವನ್ನು ಬ್ಯಾಂಕ್‌ನಲ್ಲಿ ಕೊಡಿಸುತ್ತೇನೆಂದು ಹಲವರಿಗೆ ನಂಬಿಸಿ ವಂಚಿಸಿದ್ದಾಳೆಂದು ವರದಿಯಾಗಿದೆ. 


ರಾಜ್ಯದಾದ್ಯಂತ ಸಾವಿರಾರು ಜನರಿಗೆ 38 ಕೋಟಿ ರೂ.ಗೂ ಅಧಿಕ ಹಣವನ್ನು ಮೋಸ ಮಾಡಿದ್ದಾಳೆಂದು ತಿಳಿದು ಬಂದಿದೆ. ಕ್ರಿಮಿನಲ್ ಲಾಯರ್ ಮೂಲಕ ದುಡ್ಡು ವಾಪಸ್ ಕೇಳುವವರಿಗೆ ಈಕೆ ಕೇಸ್ ದಾಖಲಿಸುವ ಭಯ ಹುಟ್ಟಿಸುತ್ತಿದ್ದಳಂತೆ. ಇದಲ್ಲದೆ ಚೆಕ್ ಬರೆಸಿಕೊಂಡು ಚೆಕ್‌ಬೌನ್ಸ್ ಕೇಸ್ ದಾಖಲಿಸುವ ಬೆದರಿಕೆ ಹಾಕಿದ್ದಳೆಂದು ತಿಳಿದುಬಂದಿದೆ.


ಇದನ್ನೂ ಓದಿ: ʼದರ್ಶನ್ ತುಂಬಾ ಒಳ್ಳೆಯವರು.. ದೇವರು ಅವರನ್ನು ಕೈ ಬಿಡೋದಿಲ್ಲʼ-ನಟಿ ಮಾಲಾಶ್ರೀ   


ವಂಚನೆಯ ವಿಚಾರ ತಿಳಿದ ಮೇಲೆ 6ನೇ ಗಂಡ ರಾಜಾಹುಸೇನ್ ಈಕೆಯನ್ನು ಪ್ರಶ್ನಿಸಿದ್ದಾನೆ. ಆತನ ವಿರುದ್ಧವೂ ಕೇಸ್ ದಾಖಲಿಸುವ ಬೆದರಿಕೆ ಹಾಕಿದ್ದಳಂತೆ. ವಂಚಕಿ ತಬುಸುಮ್ ಮೇಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಂಚನೆ ಪ್ರಕರಣಗಳು ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.