ತಿರಂಗಾ ಯಾತ್ರೆಗೆ ಬಂದವರಿಗೆ ಫ್ರೀ ಪೆಟ್ರೋಲ್, ಹೆಲ್ಮೆಟ್ ಆಫರ್..! ಪೆಟ್ರೋಲ್ ಕೊಡದಿದ್ದಕ್ಕೆ ಬೈಕ್ ಸವಾರರ ಗಲಾಟೆ..!

Written by - Zee Kannada News Desk | Last Updated : Aug 14, 2022, 03:54 PM IST
  • ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಬಾಗೇಪಲ್ಲಿ ಪಟ್ಟಣದಲ್ಲಿ ತಿರಂಗಾ ಬೈಕ್ ಯಾತ್ರೆ ಹಮ್ಮಿಕೊಳ್ಳಲಾಗಿತ್ತು.
 ತಿರಂಗಾ ಯಾತ್ರೆಗೆ ಬಂದವರಿಗೆ ಫ್ರೀ ಪೆಟ್ರೋಲ್, ಹೆಲ್ಮೆಟ್ ಆಫರ್..! ಪೆಟ್ರೋಲ್ ಕೊಡದಿದ್ದಕ್ಕೆ ಬೈಕ್ ಸವಾರರ ಗಲಾಟೆ..! title=
ಸಾಂದರ್ಭಿಕ ಚಿತ್ರ

ತಿರಂಗಾ ಯಾತ್ರೆಗೆ ಬಂದ ಬೈಕ್ ಸವಾರರಿಗೆ ಫ್ರೀ ಪೆಟ್ರೋಲ್ ಹಾಗೂ ಫ್ರೀ ಹೆಲ್ಮೆಟ್ ಕೊಡ್ತೀವಿ ಅಂತ ಬಿಜೆಪಿ ಮುಖಂಡ ಆಫರ್ ಕೊಟ್ಟಿದ್ದು, ಫ್ರೀ ಪೆಟ್ರೋಲ್ ಹಾಕ್ತಿಲ್ಲ ಅಂತ ಬಂಕ್‌ನಲ್ಲಿ ಬೈಕ್ ಸವಾರರು ಗಲಾಟೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ.

ಇದನ್ನೂ ಓದಿ: Bigg Boss Kannada OTT : ಕಾಂಟ್ರವರ್ಷಿಯಲ್‌ ಲೇಡಿ ಸೋನು ಗೌಡ ಎಲಿಮಿನೇಟ್‌ ಆದ್ರಾ..? ಇಲ್ವಾ..?

ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಬಾಗೇಪಲ್ಲಿ ಪಟ್ಟಣದಲ್ಲಿ ತಿರಂಗಾ ಬೈಕ್ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮುಂದಿನ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಸಿ ಮುನಿರಾಜು ಅವರು ಆಯೋಜನೆ ಮಾಡಿದ್ದರು.

ಬಾಗೇಪಲ್ಲಿ-ಬೆಂಗಳೂರು ಹೈವೇಯಲ್ಲಿರುವ ಗಂಗೋತ್ರಿ ಪೆಟ್ರೋಲಿಯಂ ಬಂಕ್‌ಗೆ ಸಾವಿರಾರು ಜನ ಮುತ್ತಿಗೆ ಹಾಕಿ ಫ್ರೀ ಪೆಟ್ರೋಲ್ ಕೊಡ್ತೀರಾ ಇಲ್ವಾ ಅಂತ ಗಲಾಟೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News