ಬೆಂಗಳೂರು: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಕೋಮುವಾದಿ ಶಕ್ತಿಗಳು ಪ್ರಯತ್ನ ನಡೆಸುತ್ತಿವೆ. ಹಾಗಾಗಿ ನಾಳೆ ನಡೆಯಬೇಕಿದ್ದ ಸೌಹಾರ್ದ ನಡಿಗೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಹೇಳಿಕೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಗಾರರೊಂದಿಗೆ ಮಾತನಾಡಿದ ರೈ ಸದ್ಯ ಮಂಗಳೂರಿನಲ್ಲಿ ಶಾಂತಿ ನೆಲೆಸಿದೆ. ಮತೀಯ ಸಂಘಟನೆಗಳು ಕಾನೂನಿಗೆ ಭಂಗ ತರಲು ಯತ್ನಿಸುತ್ತಿವೆ. ರಾತ್ರೋ ರಾತ್ರಿ ಕೊಲೆಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಹೇಳಿದರು. 


ಬಿಜೆಪಿಯ ಜಾಥಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏನೂ ಎಫೆಕ್ಟ್ ಆಗಿಲ್ಲ. ಅವರ ತಂತ್ರವನ್ನು ನಾವು ವಿಫಲಗೊಳಿಸಿದ್ದೇವೆ ಎಂದು ಮಾಧ್ಯಮಗಳಿಗೆ ರೈ ತಿಳಿಸಿದರು.