ದಕ್ಷಿಣ ಕನ್ನಡ : ಶಾಪಿಂಗ್‌ ಮಾಡಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಬಾಲಕಿ ನಾಪತ್ತೆಯಾಗಿರುವ ಕುರಿತು ಮಂಗಳೂರು ನಗರದ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ ಮುಕ್ಕ ಸಮೀಪದ ಮಿತ್ರಪಟ್ನ ಮಾತೃಛಾಯಾ ನಿವಾಸಿ ಸಂತೋಷ ಮತ್ತು ರೇಖಾ ದಂಪತಿಯ ಪುತ್ರಿ ಸ್ಪೂರ್ತಿ (17), ನಾಪತ್ತೆಯಾದ ಬಾಲಕಿ ಎಂದು ತಿಳಿದು ಬಂದಿದೆ.


COMMERCIAL BREAK
SCROLL TO CONTINUE READING

ಜೂ.8ರಂದು ಬೆಳಗ್ಗೆ 8.30 ರ ಸುಮಾರಿಗೆ ಶಾಪಿಂಗ್‌ಗೆ ಹೋಗುವುದಾಗಿ ಹೇಳಿ ಮುಕ್ಕ ಮಿತ್ರಪಟ್ನ ಮನೆಯಿಂದ ತೆರಳಿದ್ದ ಸ್ಪೂರ್ತಿ ಸಂಜೆಯಾದರೂ ಮನೆಗೆ ಬಂದಿರಲಿಲ್ಲ ಎನ್ನಲಾಗಿದೆ. ಗಾಬರಿಗೊಂಡ ಆಕೆಯ ಮನೆಯವರು ಸಂಬಂಧಿಕರು, ಸ್ನೇಹಿತರನ್ನು  ವಿಚಾರಿದ್ದು, ಎಲ್ಲೂ ಆಕೆ ಪತ್ತೆಯಾಗಿಲ್ಲ. ಬಳಿಕ ಆಕೆಯ ತಾಯಿ ರೇಖಾ ಅವರು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಮಗಳು ಕಾಣೆಯಾಗಿರುವ ಕುರಿತು ದೂರು ದಾಖಲಿಸಿದ್ದಾರೆ.


ಇದನ್ನೂ ಓದಿ : ಪೊಲೀಸ್ ಕಾನ್ಸ್ಟೆಬಲ್ ಮೇಲೆ ಮಾರಣಾಂತಿಕ ಹಲ್ಲೆ..!


ನಾಪತ್ತೆಯಾದ ಸ್ಪೂರ್ತಿ 5 ಅಡಿ ಎತ್ತರ, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ ಹೊಂದಿದ್ದಾರೆ. ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಬಿಳಿ ಬಣ್ಣದ ಟಿ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು, ಕುತ್ತಿಗೆಯಲ್ಲಿ ಚಿನ್ನದ ಸರ ಮತ್ತು ಸಣ್ಣ ತಾಯತ ಧರಿಸಿರುತ್ತಾರೆ.


ಇವರು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್‌ ಠಾಣಾ ದೂರವಾಣಿ ಸಂಖ್ಯೆ 0824-2220540, 9480805360, 9480802345 ಅಥವಾ ಮಂಗಳೂರು ನಗರದ ಕಂಟ್ರೋಲ್‌ ರೂಮ್‌ 0824 2220800 ಗೆ ಸಂಪರ್ಕಿಸುವಂತೆ ಸುರತ್ಕಲ್‌ ಪೊಲೀಸ್‌ ಠಾಣೆಯ ಪ್ರಕಟಣೆ ತಿಳಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.