ಎಲ್ಲಾ ವಿಧಾನ ಪರಿಷತ್ ಸದಸ್ಯರಿಗೂ 50 ಕೋಟಿ ರೂ. ಅನುದಾನ ನೀಡಿ ಎಂದ ಜೆಡಿಎಸ್ ಎಂ ಎಲ್ ಸಿ

ನಾಮನಿರ್ದೇಶಿತ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಕೋರಿಕೆಯ ಮೇರೆಗೆ 50 ಕೋಟಿ ರೂ. ಅನುದಾನ ನೀಡಿದಂತೆ ಎಲ್ಲ ವಿಧಾನ ಪರಿಷತ್ ಸದಸ್ಯರಿಗೂ 50 ಕೋಟಿ ರೂ. ಅನುದಾನ ನೀಡಬೇಕು ಎಂದು ಮೇಲ್ಮನೆ ಸದಸ್ಯ ಭೋಜೇಗೌಡರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

Written by - Zee Kannada News Desk | Last Updated : Oct 3, 2022, 04:35 PM IST
  • ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿಗಳು ಚನ್ನಪಟ್ಟಣ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡಿರುವುದು ಸ್ವಾಗತಾರ್ಹ.
  • ಅಲ್ಲಿನ ವಿಧಾನ ಪರಿಷತ್ ಸದಸ್ಯರ ಕೋರಿಕೆಯನ್ನು ಮನ್ನಿಸಿ ಅನುದಾನ ಬಿಡುಗಡೆ ಮಾಡಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.
ಎಲ್ಲಾ ವಿಧಾನ ಪರಿಷತ್ ಸದಸ್ಯರಿಗೂ 50 ಕೋಟಿ ರೂ. ಅನುದಾನ ನೀಡಿ ಎಂದ ಜೆಡಿಎಸ್ ಎಂ ಎಲ್ ಸಿ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ನಾಮನಿರ್ದೇಶಿತ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಕೋರಿಕೆಯ ಮೇರೆಗೆ 50 ಕೋಟಿ ರೂ. ಅನುದಾನ ನೀಡಿದಂತೆ ಎಲ್ಲ ವಿಧಾನ ಪರಿಷತ್ ಸದಸ್ಯರಿಗೂ 50 ಕೋಟಿ ರೂ. ಅನುದಾನ ನೀಡಬೇಕು ಎಂದು ಮೇಲ್ಮನೆ ಸದಸ್ಯ ಭೋಜೇಗೌಡರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: BBK 9 : ಐಶ್ವರ್ಯಾ ಪಿಸ್ಸೆ ಹೊರಹೋಗುವ ಮುನ್ನ ‌ಆರ್ಯವರ್ಧನ್ ರನ್ನು ನೇರ ನಾಮಿನೇಟ್ ಮಾಡಿದ್ದೇಕೆ?

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು,  ಮುಖ್ಯಮಂತ್ರಿಗಳು ಚನ್ನಪಟ್ಟಣ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡಿರುವುದು ಸ್ವಾಗತಾರ್ಹ. ಅಲ್ಲಿನ ವಿಧಾನ ಪರಿಷತ್ ಸದಸ್ಯರ ಕೋರಿಕೆಯನ್ನು ಮನ್ನಿಸಿ ಅನುದಾನ ಬಿಡುಗಡೆ ಮಾಡಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Adipurush Movie Teaser : ಆದಿಪುರುಷ ಸಿನಿಮಾ ಟೀಸರ್ ರಿಲೀಸ್ : ಉಘೇ ಉಘೇ ಎಂದ ಫ್ಯಾನ್ಸ್

ಸಿ.ಪಿ.ಯೋಗೇಶ್ವರ್ ಅವರಿಗೆ ನೀಡಿದ ಮಾದರಿಯಲ್ಲಿ ಕರ್ನಾಟಕದ ಎಲ್ಲಾ ವಿಧಾನ ಪರಿಷತ್ತಿನ ಶಾಸಕರ ಕ್ಷೇತ್ರಕ್ಕೂ  50 ಕೋಟಿಗಳ ಅನುದಾನ ನೀಡಬೇಕೆಂದು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News