ನ್ಯಾಯ ಕೊಡಿ‌ ಇಲ್ಲಾ ದಯಾ ಮರಣ ಕೊಡಿ: ಸಂತ್ರಸ್ಥ ಮಹಿಳೆಯರ ಕಣ್ಣೀರು

ಚಾಮರಾಜನಗರದಲ್ಲಿ ಸಂತ್ರಸ್ಥ ಮಹಿಳೆಯರು ಸುದ್ದಿಗೋಷ್ಠಿ ನಡೆಸಿ ತಮ್ಮ ಅಳಲು ತೋಡಿಕೊಂಡರು.ಉಮ್ಮಳಿಸಿ ಬಂದ ದುಃಖ‌ ತಾಳಲಾರದೇ ಕಣ್ಣೀರಿಟ್ಟರು.  

Written by - Ranjitha R K | Last Updated : Jul 9, 2024, 03:01 PM IST
  • 3 ವರ್ಷದ ಹಿಂದೆ ನಡೆದ ಆಕ್ಸಿಜನ್ ದುರಂತ
  • ಸಂತ್ರಸ್ಥರಿಗೆ ನ್ಯಾಯ ಸಿಗದೇ,ಪರಿಹಾರ ಸಿಗದೇ ಅಲೆದಾಟ
  • ದುಃಖ ತೋಡಿಕೊಂಡ ಮಹಿಳೆ
ನ್ಯಾಯ ಕೊಡಿ‌ ಇಲ್ಲಾ ದಯಾ ಮರಣ ಕೊಡಿ: ಸಂತ್ರಸ್ಥ ಮಹಿಳೆಯರ ಕಣ್ಣೀರು title=

ಚಾಮರಾಜನಗರ: ಕೊರೊನಾ ಕಾಲದಲ್ಲಿ ಆಕ್ಸಿಜನ್ ದುರಂತ ನಡೆದು ಕುಟುಂಬದ ಆಧಾರಸ್ತಂಭ ಕಳೆದುಕೊಂಡ ಸಂತ್ರಸ್ಥರಿಗೆ ನ್ಯಾಯ ಸಿಗದೇ ತಮಗೇ ದಯಾ ಮರಣ ಕೊಡಿ ಎಂದು ಕಣ್ಣೀರು ಇಟ್ಟಿದ್ದಾರೆ.

ಚಾಮರಾಜನಗರದಲ್ಲಿ ಸಂತ್ರಸ್ಥ ಮಹಿಳೆಯರು ಸುದ್ದಿಗೋಷ್ಠಿ ನಡೆಸಿ ತಮ್ಮ ಅಳಲು ತೋಡಿಕೊಂಡರು.ಉಮ್ಮಳಿಸಿ ಬಂದ ದುಃಖ‌ ತಾಳಲಾರದೇ ಕಣ್ಣೀರಿಟ್ಟರು.

ಇದನ್ನೂ ಓದಿ : ಹೂಣ್ಣೂರು ಆರಾಧ್ಯ ದೈವ ವಿಠ್ಠಲನಿಗೆ ಆವರಿಸಿದ ಘಟಪ್ರಭಾ

ಚಾಮರಾಜನಗರ  ಜಿಲ್ಲಾಸ್ಪತ್ರೆಯಲ್ಲಿ ಕಳೆದ 3 ವರ್ಷದ ಹಿಂದೆ ನಡೆದ ಆಕ್ಸಿಜನ್ ದುರಂತ ಸಂತ್ರಸ್ಥರಿಗೆ ಇನ್ನೂ ಕೂಡಾ ಸರಿಯಾದ ನ್ಯಾಯ ಸಿಗದೇ,ಪರಿಹಾರ ಸಿಗದೇ ಅಲೆದಾಡುತ್ತಿದ್ದು ಹೊರಗುತ್ತಿಗೆ ಆಧಾರದಲ್ಲಿ ನೌಕರರಿಗೂ ಈಗ ಕುತ್ತು ಬಂದಿದೆ.

ತಾಲೂಕು ಕಚೇರಿ,ಸ್ಥಳೀಯ  ಹಾಸ್ಟೆಲ್ ಗಳಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರನ್ನು ಏಕಾಏಕಿ ಸಿಮ್ಸ್ ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿ ಎಂದು ಸೂಚಿಸಿದ್ದು ತಮ್ಮವರನ್ನು ಕಳೆದುಕೊಂಡ ಆಸ್ಪತ್ರೆಯಲ್ಲಿ ತಾವು ಕೆಲಸ ಮಾಡುವುದಿಲ್ಲ ,ಬೇರೆ ಕಡೆ ತಮಗೆ ಖಾಯಂ ಉದ್ಯೋಗ ಕೊಡಿ ಎಂದು ಸಂತ್ರಸ್ಥರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಕಾನೂನು ಪಾಲನೆ ಮಾಡದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ: ಗೃಹ ಸಚಿವ ಪರಮೇಶ್ವರ್

ಆಕ್ಸಿಜನ್ ದುರಂತಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ನಮ್ಮ ಕುಟುಂಬಗಳಿಗೆ ನ್ಯಾಯ ಕೊಡಿಸಬೇಕು ಎಂದು ಇದು ಸಾಧ್ಯವಿಲ್ಲ ಎಂದಾದರೇ ತಮಗೆ ದಯಾ ಮರಣ ಕೊಡಿ ಎಂದು ಸಂತ್ರಸ್ಥ ಮಹಿಳೆಯರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಭಾರತ್ ಜೋಡೋ ಯಾತ್ರೆ ವೇಳೆ ಸಂತ್ರಸ್ಥ ಕುಟುಂಬಗಳನ್ನು ರಾಹುಲ್ ಗಾಂಧಿ ಭೇಟಿ ಮಾಡಿ ಖಾಯಂ ಉದ್ಯೋಗದ ಭರವಸೆ ಕೊಟ್ಟಿದ್ದರು.ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದಾಗಿ ಆಶ್ವಾಸನೆ ನೀಡಿದ್ದರು.ಆದರೆ,ಸರ್ಕಾರ ಬಂದು ಒಂದು ವರ್ಷವಾದರೂ ಯಾವುದೂ ಈಡೇರಿಲ್ಲ ಎಂದು ಸಂತ್ರಸ್ಥರು ಕಣ್ಣೀರು ಹಾಕಿದರು.

ನೆಪ ಮಾತ್ರಕ್ಕೆ 9 ಮಂದಿಗೆ ಗ್ರೂಪ್ ಡಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಗಿತ್ತು. ಈಗ ಅದು ಕೂಡಾ ಇಲ್ಲ.ಅತ್ತ ಕೂಲಿ ಕೆಲಸಕ್ಕೂ ಹೋಗಲಾಗದೆ ಇತ್ತ ಹೊರ ಗುತ್ತಿಗೆ ಕೆಲಸವನ್ನು ಮಾಡಲಾಗದೆ ತಾವು ಅತಂತ್ರರಾಗಿದ್ದೇವೆಂದು ಸಂತ್ರಸ್ಥೆಯರು ಪರಿತಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd

Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News