ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ಡಿ.ಜೆ.ಹಳ್ಳಿಯ ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗೋದ್ರೇಕ ದೃಢಪಟ್ಟಿರುವುದರಿಂದ ನಂಬರ್ 72 ,ಮೋದಿ ರಸ್ತೆ ಡಿ.ಜೆ.ಹಳ್ಳಿ ಕೇಂದ್ರ ಸ್ಥಾನದಿಂದ ಸುತ್ತಲಿನ 5 ಕಿ.ಮೀ.ವ್ಯಾಪ್ತಿ ಪ್ರದೇಶವನ್ನು ರೋಗಪೀಡಿತ ವಲಯ ಹಾಗೂ 5 ರಿಂದ 25 ಕಿ.ಮೀ.ಪ್ರದೇಶವನ್ನು ಜಾಗೃತ ವಲಯ ಎಂದು ಪಶುಸಂಗೋಪನೆ ಹಾಗೂ ಹೈನುಗಾರಿಕೆ ಇಲಾಖೆ ಘೋಷಿಸಿದೆ.ಅಧಿಸೂಚಿತ ಪ್ರದೇಶದ ಒಳಗೆ ಮತ್ತು ಹೊರಗೆ ಕುದುರೆ, ಕತ್ತೆ ಮತ್ತು ಹೇಸರಗತ್ತೆಗಳ ಚಲನ ವಲನವನ್ನು ನಿರ್ಬಂಧಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: RCB ಮಾಲೀಕ ಯಾರು ಗೊತ್ತಾ? ಇವರ ನಿವ್ವಳ ಮೌಲ್ಯ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿ


'ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿನಿಯಮ 2009" ರ ಕಲಂ-6 ಹಾಗೂ ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ  ಹೊರಡಿಸಿರುವ ಗ್ಲಾಂಡರ್ಸ್ ನಿಯಂತ್ರಣ ಹಾಗೂ ನಿರ್ಮೂಲನೆ ರಾಷ್ಟ್ರೀಯ ಕ್ರಿಯಾ ಯೋಜನೆ-2019 ರ ಅಧ್ಯಾಯ 4.1 (National Action Plan for Control and Eradication of Glanders in India-2019 ) ರ ಪ್ರಕಾರ ರೋಗೋದ್ರೇಕ ಕಾಣಿಸಿಕೊಂಡ ಕುದುರೆ ಮಾಲೀಕರಾದ ಖಲೀದ್ ಷರೀಫ್ ಬಿನ್ ಎ.ಜೆ ಷರೀಫ್ ಅವರ ಸಾಮಾನ್ಯ ವಾಸಸ್ಥಳವಾದ ಬೆಂಗಳೂರು ಉತ್ತರ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆಯ ನಂ.72, ಮೋದಿ ರಸ್ತೆ, ಡಿ.ಜೆ.ಹಳ್ಳಿ ಕೇಂದ್ರವಾಗಿದ್ದು, ಅದರ ವ್ಯಾಪ್ತಿಯಿಂದ ಸುತ್ತಲಿನ (ರೇಡಿಯಸ್)5 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು “ರೋಗ ಪೀಡಿತ ವಲಯ" ಎಂದು ಹಾಗೂ 5 ರಿಂದ 25 ಕಿ.ಮೀ ಗಳ ವ್ಯಾಪ್ತಿಯ (ರೇಡಿಯಸ್/ ತ್ರಿಜ್ಯ) ಪ್ರದೇಶವನ್ನು “ಜಾಗೃತ ವಲಯ" ಎಂದು ಪಶುಸಂಗೋಪನಾ ಹಾಗೂ ಹೈನುಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.