Laxman Savadi : 'ವಾಹನ ಮಾಲೀಕ'ರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..! 

ತೆರಿಗೆ ಪಾವತಿಯ ಅವಧಿಯನ್ನು ಮತ್ತೆ ಜೂನ್.30ರವರೆಗೆ ವಿಸ್ತರಣೆ

Last Updated : Jun 12, 2021, 12:40 PM IST
  • ರಾಜ್ಯ ಸರ್ಕಾರದಿಂದ ಈಗಾಗಲೇ ವಾಹನ ಮಾಲೀಕರಿಗೆ ಲಾಕ್ ಡೌನ್ ಸಂಕಷ್ಟ
  • ತೆರಿಗೆ ಪಾವತಿಯ ಅವಧಿಯನ್ನು ಜೂನ್.15ರವರೆಗೆ ವಿಸ್ತರಣೆ ಮಾಡಿತ್ತು
  • ತೆರಿಗೆ ಪಾವತಿಯ ಅವಧಿಯನ್ನು ಮತ್ತೆ ಜೂನ್.30ರವರೆಗೆ ವಿಸ್ತರಣೆ
 Laxman Savadi : 'ವಾಹನ ಮಾಲೀಕ'ರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..!  title=

ಬೆಂಗಳೂರು : ರಾಜ್ಯ ಸರ್ಕಾರದಿಂದ ಈಗಾಗಲೇ ವಾಹನ ಮಾಲೀಕರಿಗೆ ಲಾಕ್ ಡೌನ್ ಸಂಕಷ್ಟದಿಂದಾಗಿ ತೆರಿಗೆ ಪಾವತಿಯ ಅವಧಿಯನ್ನು ಜೂನ್.15ರವರೆಗೆ ವಿಸ್ತರಣೆ ಮಾಡಿತ್ತು. ಇಂತಹ ತೆರಿಗೆ ಪಾವತಿಯ ಅವಧಿಯನ್ನು ಮತ್ತೆ ಜೂನ್.30ರವರೆಗೆ ವಿಸ್ತರಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದ್ದು, ವಾಹನ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ(Laxman Savadi), ಕೋವಿಡ್-19 ರ 2ನೇ ಅಲೆ ಹಿನ್ನೆಲೆಯಲ್ಲಿ ಎಲ್ಲಾ ಸರಕು ಸಾಗಾಣಿಕೆ ಮತ್ತು ಸಾರಿಗೆ ಪ್ರಯಾಣಿಕರ ವಾಹನ ಮಾಲೀಕರ ಅನುಕೂಲಕ್ಕಾಗಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ಕಲಂ 4 (1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ದಿನಾಂಕ 15-06-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಸಲು ದಿನಾಂಕ 30-06-2021 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.

ಇದನ್ನೂ ಓದಿ : 'KSRTC' ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್! 

ಸರ್ಕಾರ(Karnataka Govt) ಕೈಗೊಂಡಿರುವ ಈ ಕ್ರಮದ ಪ್ರಯೋಜನವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : SSLC ಯಾವ ವಿದ್ಯಾರ್ಥಿಯನ್ನು ಫೇಲ್ ಮಾಡಲ್ಲ, ಆದ್ರೆ, ಕನಿಷ್ಠ ಅಂಕ ನಿಗದಿ ಮಾಡಿಲ್ಲ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News