ಶಾಂತಿ ಕದಡುವ ಕೆಲಸವನ್ನ ಸರ್ಕಾರ ಸಹಿಸಲ್ಲ-ಸಿಎಂ

ಬಿಜೆಪಿಯ ಮಂಗಳೂರು ಚಲೋ ವಿಚಾರದ ಬಗ್ಗೆ ಮಾತನಾಡಿರುವ ಸಿಎಂ, ಬಿಜೆಪಿಯವರು ಹಿಂದುತ್ವದ ಪರವಾಗಿಲ್ಲ, ಬದಲಿಗೆ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದಾರೆ.

Last Updated : Sep 5, 2017, 01:10 PM IST
ಶಾಂತಿ ಕದಡುವ ಕೆಲಸವನ್ನ ಸರ್ಕಾರ ಸಹಿಸಲ್ಲ-ಸಿಎಂ title=

ಬೆಂಗಳೂರು: ಬಿಜೆಪಿಯ ಮಂಗಳೂರು ಚಳುವಳಿ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶಕ್ಕೆ ನಮ್ಮ ಅಭ್ಯಂತರವಿಲ್ಲ, ಬಿಜೆಪಿಯವರು ಹಿಂದುತ್ವದ ಪರವಾಗಿಲ್ಲ, ಬದಲಿಗೆ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನುಡಿದಿದ್ದಾರೆ.

ಬೈಕ್ ರ್ಯಾಲಿಯಿಂದ ಸಾಮರಸ್ಯ ಹಾಳಾಗುತ್ತದೆ. ಜೊತೆಗೆ ಜನರಿಗೆ ತೊಂದರೆ ಉಂಟಾಗುತ್ತದೆ. ರೈತರ ಸಾಲ ಮನ್ನಾಕ್ಕಾಗಿ ದೆಹಲಿ ಚಲೋ ಕೈಗೊಳ್ಳಲಿ. ನಾವು ಬಳ್ಳಾರಿಗೆ ಪಾದಯಾತ್ರೆ ಮಾಡಿದ್ವಿ, ಬೇಕಿದ್ದರೆ ಅವರೂ ಪಾದಯಾತ್ರೆ ಮಾಡಿಕೊಳ್ಳಲಿ ಎಂದು ಸಿಎಂ ಹೇಳಿದರು. 

ಶಾಂತಿ ಕದಡುವ ಕೆಲಸವನ್ನ ಸರ್ಕಾರ ಸಹಿಸಲ್ಲ, ಯಡಿಯೂರಪ್ಪರಂತೆ ಏಕವಚನದಲ್ಲಿ ಮಾತನಾಡಲು ನನಗೆ ಬರುವುದಿಲ್ಲಾ ಎಂದ ಸಿಎಂ ಅವರ ಭಾಷೆ, ಕೆಟ್ಟಪದ ನಮಗೆ ಬರಲ್ಲ, ಶೋಭಾ ಕರಂದ್ಲಾಜೆ ಹಿಂದೂಗಳ ಪರ ಇಲ್ಲ, ಸಮಾಜ ಹಾಳು ಮಾಡುವವರ ಪರ ಇದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

Trending News