ಬೆಂಗಳೂರು: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯಕರ್ತರನ್ನ ಹತ್ಯೆ ಮಾಡುವ ಮೂಲಕ ಕಾಣದ ಕೈಗಳು ಷಡ್ಯಂತ್ರ ನಡೆಸಿವೆ ಎಂದು ಬಿಜೆಪಿ ಅರೋಪಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಗುರುವಾರ ಸರಣಿ ಟ್ವೀಟ್ ಮಾಡಿದೆ.


COMMERCIAL BREAK
SCROLL TO CONTINUE READING

‘ಮತಾಂಧ ಶಕ್ತಿಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹದಗಡೆಸಲು ವಿಫಲ ಪಯತ್ನ ನಡೆಸುತ್ತಲೇ ಇವೆ. ಬಿಜೆಪಿ ಸರ್ಕಾರ ಪ್ರತಿ ಪ್ರಕರಣದಲ್ಲೂ  ದುಷ್ಕರ್ಮಿಗಳ ಹೆಡೆಮುರಿ ಕಟ್ಟುತ್ತಾ ಬಂದಿದೆ. ಪ್ರವೀಣ್ ನೆಟ್ಟಾರು ಹತ್ಯೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿಯವರು ಈ ಹಿಂದಿನ ಎಲ್ಲಾ ಪ್ರಕರಣಗಳಿಗಿಂತಲೂ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಸಮಾಜಘಾತುಕ ಶಕ್ತಿಗಳ ವಿರುದ್ಧ ಬಿಜೆಪಿ ಸಮರ ಸಾರಿದೆ’ ಎಂದು ಹೇಳಿದೆ.


ಇದನ್ನೂ ಓದಿ: DK Shivakumar : 'ಒಬ್ಬ ಹೋಮ್‌ ಮಿನಿಸ್ಟರ್, ಪಕ್ಷ ಅಂತ ತೊಗೊಂಡರೇ ರಾಜ್ಯ ಉಳಿಯಲು ಸಾಧ್ಯವಿಲ್ಲ'


Siddaramaiah : ಸಿದ್ದರಾಮಯ್ಯ 'ಅಮೃತ ಮಹೋತ್ಸವ' : 50 ಎಕರೆ ಜಾಗದಲ್ಲಿ ಬೃಹತ್ ವೇದಿಕೆ!


‘ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯಕರ್ತರನ್ನ ಹತ್ಯೆ ಮಾಡುವ ಮೂಲಕ ಕಾಣದ ಕೈಗಳು ಷಡ್ಯಂತ್ರ ನಡೆಸಿವೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಘಟನೆಯ ಹಿಂದಿರುವ ದುಷ್ಕರ್ಮಿಗಳನ್ನು ಹೊರಗಳೆದು, ಸಮಾಜದ ಮುಂದೆ ಬಯಲು ಮಾಡಲಿದ್ದಾರೆ. ಕಾಯಕರ್ತರ ರಕ್ಷಣೆ ಬಿಜೆಪಿ ಗುರಿಯಾಗಿದ್ದು, ಮುಂದೆಂದೂ ಈ ಪರಿಸ್ಥಿತಿ ಮರುಕಳಿಸದಂತೆ ನೋಡಿಕೊಳ್ಳಲಿದೆ’ ಎಂದು ಬಿಜೆಪಿ ಹೇಳಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.