ಬೆಂಗಳೂರು: ರಾಷ್ಟ್ರ ರಾಜಧಾನಿಯ ನಂತರ ರಾಜ್ಯ ರಾಜಧಾನಿಯಲ್ಲಿ ವಾಯುಮಾಲಿನ್ಯದ ಭಯ ಕಾಡಲಾರಂಭಿಸಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಖಾಸಗಿ ಬಸ್ಗಳನ್ನು ನಿಷೇಧಿಸಲು ಸರ್ಕಾರ ಮುಂದಾಗಿದೆ.


COMMERCIAL BREAK
SCROLL TO CONTINUE READING

ಸದಾ ಜನಜಂಜಾಟದಿಂದ ತುಂಬಿ ತುಳುಕುವ ಸಿಲಿಕಾನ್ ಸಿಟಿಯೂ ವಾಯುಮಾಲಿನ್ಯಕ್ಕೆ ಹೊರತಾಗಿಲ್ಲ. ಈ ನಿಟ್ಟಿನಲ್ಲಿ ವಾಯುಮಾಲಿನ್ಯವನ್ನು ತಡೆಗಟ್ಟಲು ಮುಂದಾಗಿರುವ ಸರ್ಕಾರ ಬೆಂಗಳೂರಿನಲ್ಲಿ ಕೇವಲ ಬಿಎಂಟಿಸಿ ಬಸ್ಗಳು, ಕೆಎಸ್ಆರ್ಟಿಸಿ ಬಸ್ಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸುವ ನೂತನ ಯೋಜನೆಯನ್ನು ಜಾರಿಗೊಳಿಸಲಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಸರ್ಕಾರ ಏನಾದರೂ ಈ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದೆ ಆದಲ್ಲಿ ಬೆಂಗಳೂರಿನಲ್ಲಿ ದಿನನಿತ್ಯ ಸಂಚರಿಸುವ ನೂರಾರು ಖಾಸಗಿ ಬಸ್ಗಳಿಗೆ ಬ್ರೇಕ್ ಬೀಳಲಿದೆ.