ಇಂದಿರಾ ಕ್ಯಾಂಟೀನ್ ಮೆನು ಬದಲಾವಣೆ ಮಾಡಿದ ಸರ್ಕಾರ

Indira Canteen Menu: ಜನರ ಒತ್ತಾಯದ ಮೇರೆಗೆ ಇಂದಿರಾ ಕ್ಯಾಂಟೀನ್ ಮೆನು ಬದಲಾವಣೆ ಬಗ್ಗೆ ಚಿಂತಿಸಿರುವ ಸರ್ಕಾರ, ಇಷ್ಟು ವರ್ಷಗಳವರೆಗೆ ಚಾಲ್ತಿಯಲ್ಲಿದ್ದ ಮೆನುವನ್ನು ಪರಿಷ್ಕರಣೆ ಮಾಡಿ, ಹೊಸ ಬಗೆಯ ತಿನಿಸುಗಳನ್ನು ಆಹಾರ ಕ್ರಮದಲ್ಲಿ ಅಳವಡಿಸಲು ಯೋಜಿಸಿದೆ. 

Written by - Yashaswini V | Last Updated : Jun 20, 2023, 05:25 PM IST
  • ಇಂದಿರಾ ಕ್ಯಾಂಟೀನ್ ಮೆನು ಬದಲಾವಣೆ ಮಾಡಿದ ಸರ್ಕಾರ
  • ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಮತ್ತೆ ಪುನಶ್ಚೇತನ
  • ಇಂದಿರಾ ಕ್ಯಾಂಟೀನ್‌ ಗಳ ಭೌತಿಕ ಸ್ವರೂಪವನ್ನಷ್ಟೇ ಅಲ್ಲ ಆಹಾರ ಕ್ರಮವೇ ಬದಲು
ಇಂದಿರಾ ಕ್ಯಾಂಟೀನ್ ಮೆನು ಬದಲಾವಣೆ ಮಾಡಿದ ಸರ್ಕಾರ title=
Indira Canteen Menu

Indira Canteen Menu Change: ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಮತ್ತೆ ಪುನಶ್ಚೇತನಗೊಳ್ಳುಟ್ಟಿದೆ. ಇಂದಿರಾ ಕ್ಯಾಂಟೀನ್‌ ಗಳ ಭೌತಿಕ ಸ್ವರೂಪವನಷ್ಟೇ ಅಲ್ಲದೆ ಇಂದಿರಾ ಕ್ಯಾಂಟೀನ್ ನ ಆಹಾರ ಕ್ರಮವೂ ಬದಲಾಗಲಿದೆ. 

ಜನರ ಒತ್ತಾಯದ ಮೇರೆಗೆ ಇಂದಿರಾ ಕ್ಯಾಂಟೀನ್ ಮೆನು ಬದಲಾವಣೆ ಬಗ್ಗೆ ಚಿಂತಿಸಿರುವ ಸರ್ಕಾರ, ಇಷ್ಟು ವರ್ಷಗಳವರೆಗೆ ಚಾಲ್ತಿಯಲ್ಲಿದ್ದ ಮೆನುವನ್ನು ಪರಿಷ್ಕರಣೆ ಮಾಡಿ, ಹೊಸ ಬಗೆಯ ತಿನಿಸುಗಳನ್ನು ಆಹಾರ ಕ್ರಮದಲ್ಲಿ ಅಳವಡಿಸಲು ಯೋಜಿಸಿದೆ. 

ಇದನ್ನೂ ಓದಿ- ರಾಜ್ಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ಹವಾ! ಇನ್ಮುಂದೆ ಇಲ್ಲಿ ನಾನ್‌ವೆಜ್‌ ಕೂಡಾ ಸಿಗುತ್ತಾ?

ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದ್ದು ಮುಂದಿನ ದಿನಗಳಲ್ಲಿ ಇಡ್ಲಿ ಚಟ್ನಿ/ ಸಾಂಬಾರ್,  ಬ್ರೆಡ್ & ಜಾಮ್, ಮಂಗಳೂರು ಬನ್ಸ್ ಬೇಕರಿ ಬನ್  ಪಲಾವ್  ಟೊಟೊಮ್ಯಾಟೊ ಬಾತ್, ಖಾರಾ ಪೊಂಗಲ್,  ಬಿಸಿಬೇಳೆ ಬಾತ್,  ಅನ್ನ ಸಾಂಬಾರ್,  ರಾಗಿ ಮುದ್ದೆ, ಸೊಪ್ಪುಸಾರು, ಚಪಾತಿ ಮತ್ತು ಪಲ್ಯ,  ಟೀ ಕಾಫಿ ಅಂತಹ ತಿನಿಸುಗಳು ಇಂದಿರಾ ಕ್ಯಾಂಟೀನ್‌ ನಲ್ಲಿಯೂ ಲಭ್ಯವಾಗಲಿವೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ- ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ : ಸಿಎಂ ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್ ನಲ್ಲಿ ಯಾವ ದಿನ ಯಾವ ಆಹಾರ ಸಿಗಲಿದೆ? 
ಸೋಮವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ ರೈತ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್  / ರಾಗಿಮುದ್ದೆ ಸೊಪ್ಪು ಸಾರು + ಕೀರ್
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

ಮಂಗಳವಾರ : 
ಬೆಳಗ್ಗೆ : ಇಡ್ಲಿ ಚಟ್ನಿ / ಬಿಸಿ ಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್ 
ರಾತ್ರಿ : ಅನ್ನ ಸಾಂಬಾರ್ + ರೈತ / ಚಪಾತಿ + ವೆಜ್ ಕರಿ

ಬುಧವಾರ : 
ಬೆಳಗ್ಗೆ : ಇಡ್ಲಿ ಸಾಂಬಾರ್ / ಖಾರಾ ಬಾತ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ + ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ + ಸೊಪ್ಪು ಸಾರು

ಗುರುವಾರ :
ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್ 
ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ

ಶುಕ್ರವಾರ : 
ಬೆಳಗ್ಗೆ : ಇಡ್ಲಿ ಸಾಂಬಾರ್ / ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

ಶನಿವಾರ : 
ಬೆಳಗ್ಗೆ : ಇಡ್ಲಿ ಸಾಂಬಾರ್ / ಪೊಂಗಲ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ

ಭಾನುವಾರ : 
ಬೆಳಗ್ಗೆ : ಇಡ್ಲಿ ಚಟ್ನಿ / ಖಾರಾ ಬಾತ್ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

https://zeenews.india.com/kannada/technology/lithium-cell-production-ibc...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News