ಪಿಎಸ್ಐ ಪರೀಕ್ಷೆ ಮುಂದೂಡುವ ವಿಚಾರ : ಇಂದೇ ಹೊರ ಬೀಳುವುದೇ ಸರ್ಕಾರದ ತೀರ್ಮಾನ !ಕೆಇಎ ಜೊತೆ ಸಮಾಲೋಚನೆ ಬಳಿಕ ನಿರ್ಧಾರ

ಯುಪಿಎಸ್‌ಸಿ ಮತ್ತು ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಪರೀಕ್ಷೆ ಒಂದೇ ದಿನ ನಿಗದಿಯಾಗಿರುವ ಕಾರಣ ಪಿಎಸ್‌ಐ ನೇಮಕಾತಿ ಪರೀಕ್ಷೆಗಳನ್ನು ಮುಂದೂಡುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.  

Written by - Ranjitha R K | Last Updated : Sep 11, 2024, 11:46 AM IST
  • ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಪರೀಕ್ಷೆ
  • ಸೆಪ್ಟೆಂಬರ್ 22 ರಂದು ನಿಗದಿಯಾಗಿರುವ ಪರೀಕ್ಷೆ
  • ಮುಂದೂಡುವ ಬಗ್ಗೆ ಸರ್ಕಾರದ ನಿರ್ಧಾರ ಏನು ?
ಪಿಎಸ್ಐ ಪರೀಕ್ಷೆ ಮುಂದೂಡುವ ವಿಚಾರ : ಇಂದೇ ಹೊರ ಬೀಳುವುದೇ ಸರ್ಕಾರದ  ತೀರ್ಮಾನ !ಕೆಇಎ ಜೊತೆ ಸಮಾಲೋಚನೆ ಬಳಿಕ  ನಿರ್ಧಾರ  title=

ಬೆಂಗಳೂರು : ಸೆಪ್ಟೆಂಬರ್ 22 ರಂದು ನಿಗದಿಯಾಗಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡುವ ಬೇಡಿಕೆಯ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ನಂತರ ನಿರ್ಧಾರ ಪ್ರಕಟಿಸುವುದಾಗಿ ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.

ಯುಪಿಎಸ್‌ಸಿ ಮುಖ್ಯ ಪರೀಕ್ಷೆ ಕೂಡಾ ಅದೇ ದಿನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಗಳನ್ನು ಮುಂದೂಡುವಂತೆ ಮಾಜಿ ಉಪಮುಖ್ಯಮಂತ್ರಿ ಸಿಎನ್ ಅಶ್ವಥ್ ನಾರಾಯಣ್ ನೇತೃತ್ವದ ಬಿಜೆಪಿ ನಿಯೋಗ ಮನವಿ ಸಲ್ಲಿಸಿತ್ತು. ಈ ನಿಟ್ಟಿನಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಪರಮೇಶ್ವರ್ ಹೇಳಿದ್ದಾರೆ. 

ಇದನ್ನೂ ಓದಿ : ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ASI

ಪಿಎಸ್‌ಐ ನೇಮಕಾತಿ ಪರೀಕ್ಷೆ ಬರೆಯುತ್ತಿದ್ದ ಸುಮಾರು 100 ಅಭ್ಯರ್ಥಿಗಳು ಯುಪಿಎಸ್‌ಸಿ ಮುಖ್ಯ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ಬಿಜೆಪಿ ಮುಖಂಡರು ತಮ್ಮ ಗಮನಕ್ಕೆ ತಂದಿದ್ದಾರೆ ಎಂದು ಡಾ.ಪರಮೇಶ್ವರ ತಿಳಿಸಿದ್ದಾರೆ. 
ಆದರೆ, ಒಂದು ವೇಳೆ ಪರೀಕ್ಷೆ ಮುಂದೂಡಿದರೆ, ಕೆಇಎ ಮುಂದಿನ ಆರು ತಿಂಗಳೊಳಗೆ ಪಿಎಸ್‌ಐ ಪರೀಕ್ಷೆಗಳನ್ನು ನಿಗದಿಪಡಿಸುವ ಸಾಧ್ಯತೆಯಿಲ್ಲ. ಮುಂಬರುವ ತಿಂಗಳುಗಳಲ್ಲಿ ಇತರ ಕೆಲವು ಪರೀಕ್ಷೆಗಳಿವೆ ಎಂದು  ಹೇಳಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಖಾಲಿ ಹುದ್ದೆಗಳನ್ನು ಭರ್ತಿ ಮಾಡದ ಕಾರಣ ಸುಮಾರು 1,000 ಪಿಎಸ್‌ಐಗಳ ಕೊರತೆಯಿಂದಾಗಿ ಪೊಲೀಸ್ ಇಲಾಖೆಯ ಕಾರ್ಯಗಳು ಕುಂಠಿತಗೊಳ್ಳುತ್ತಿವೆ. ಹೊಸ ಪಿಎಸ್‌ಐಗಳ ನೇಮಕಾತಿಗೆ ಪರೀಕ್ಷೆ ನಡೆದರೂ 10 ತಿಂಗಳ ತರಬೇತಿ ಪಡೆಯಬೇಕಾಗಿರುವುದರಿಂದ ಸೇವೆಗೆ ಸೇರಲು ಇನ್ನೂ ಸಮಯ ಹಿಡಿಯುತ್ತದೆ. ನಂತರ ಅವರು ಎರಡು ವರ್ಷಗಳ ಪ್ರೊಬೇಷನರಿ ಸೇವಾ ಅವಧಿಯನ್ನು ಪೂರ್ಣಗೊಳಿಸಬೇಕಾಗುತ್ತದೆ ಎಂದು  ಪರಮೇಶ್ವರ್ ತಿಳಿಸಿದ್ದಾರೆ. 

ಇದನ್ನೂ ಓದಿ : ದೆಹಲಿಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿಯಾದ ಎಂ.ಬಿ.ಪಾಟೀಲ್

ಈಗ 402 ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಗಳು ನಡೆಯುತ್ತಿವೆ.   ಎರಡನೇ ಹಂತದಲ್ಲಿ ಪರೀಕ್ಷೆಗಳನ್ನು ನಡೆಸುವ ಮೂಲಕ ಇನ್ನೂ 600 ಪಿಎಸ್‌ಐಗಳನ್ನು ನೇಮಕ ಮಾಡಲು ಸರ್ಕಾರ ಯೋಜಿಸುತ್ತಿದೆ.ಒಂದು ಪಕ್ಷ ಕೆಇಎ ಪರೀಕ್ಷೆಗಳನ್ನು ಮುಂದೂಡಲು ನಿರಾಕರಿಸಿದರೆ,ಈ ಹುದ್ದೆಗಳ ಆಕಾಂಕ್ಷಿಗಳಿಗೆ 600 ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲು ನಡೆಸುವ ಪರೀಕ್ಷೆಗಳನ್ನು ಬರೆಯಲು ಮತ್ತೊಂದು ಅವಕಾಶ ಸಿಗುತ್ತದೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News