ಮಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಯಾರಿಗೆ ಅಗತ್ಯ ಇದೆಯೋ ಅಂಥವರಿಗೆ ಯೋಜನೆಯ ಲಾಭ ಸಿಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಈ ಯೋಜನೆಯನ್ನು ಇನ್ನೂ ಹೆಚ್ಚು ಜನರಿಗೆ ತಲುಪಿಸಲು ಕ್ರಮ ವಹಿಸಲಾಗುವುದು. ಯೋಜನೆ ಅನುಷ್ಠಾನದಲ್ಲಿ ಸೋರಿಕೆಯಾಗುವುದನ್ನು ತಪ್ಪಿಸಬೇಕು,ಅಗತ್ಯ ಇರುವವರಿಗೆ ಯೋಜನೆ ಸಿಗಬೇಕು.‌ ಇದು ಹೊಸ ಯೋಜನೆ ಆಗಿದ್ದು,ನ್ಯೂನತೆ ಇದ್ದರೆ ಸರಿಪಡಿಸಿಕೊಂಡು ಮುಂದುವರಿಸುತ್ತೇವೆ ಎಂದು ದಿನೇಶ್ ಗುಂಡೂರಾವ್
 ಹೇಳಿದ್ದಾರೆ. 


ಇದನ್ನೂ ಓದಿ : Guarantee schemes: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ


ಅಗತ್ಯ ಇರುವವರಿಗೆ ಗ್ಯಾರಂಟಿ ಯೋಜನೆ ಸಿಗಬೇಕು.ಅರ್ಹತೆ ಇಲ್ಲದವರಿಗೆ ಸಿಕ್ಕಿದರೆ ಅದು ಸರ್ಕಾರಕ್ಕೆ ಹೊರೆಯಾಗುತ್ತದೆ. ಅರ್ಹತೆ ಇಲ್ಲದವರಿಗೆ ಈ ಯೋಜನೆಯ ಲಾಭ ಸಿಗುವುದು ಯೋಜನೆಯ ಉದ್ದೇಶವೂ ಅಲ್ಲ.ಬಡವರು,ಅಗತ್ಯ ಇರುವವರಿಗೆ ಸಿಗಬೇಕು ಎನ್ನುವುದೇ ಈ ಯೋಜನೆಯ ಉದ್ದೇಶ.ಸರ್ಕಾರದ ಹಣ ದುರುಪಯೋಗ ಆಗಬಾರದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.‌


ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಮೀಕ್ಷೆ ನಡೆಸಿ, ವರದಿ ಪಡೆದು ಮಾನದಂಡಗಳ ಬಗ್ಗೆ ಚರ್ಚಿಸಲಾಗುವುದು ಎಂದರು. ನಗರದ ಹೊರ ವಲಯದ ಕೆತ್ತಿಕಲ್ ನಲ್ಲಿ ನಡೆದ ಗುಡ್ಡ ಕುಸಿತಕ್ಕೆ ಸಂಬಂಧಿಸಿ ತಜ್ಞರ ವರದಿ ಪಡೆದು ಸುರಕ್ಷತೆಗೆ ಕ್ರಮ‌ ವಹಿಸಲಾಗುವುದು.ಜಿಲ್ಲಾಧಿಕಾರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯ ತನಿಖೆ ನಡೆಯುತ್ತಿದ್ದು,ಈ ತಿಂಗಳ ಕೊನೆಯೊಳಗೆ ವರದಿ ಸಲ್ಲಿಕೆಯಾಗಲಿದೆ.ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು. 


ಇದನ್ನೂ ಓದಿ : ಚಾಮರಾಜನಗರ: ಟ್ರಾಕ್ಟರ್ ರ್ಯಾಲಿ ಮಾಡಲು ಮುಂದಾದ ರೈತರು ಪೊಲೀಸ್ ವಶಕ್ಕೆ..!


ಭೂಮಿಯ ಜಾಗದ ಮಾಲೀಕರು ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ‌ ಪಡೆದಿರುವ ಕಂಪನಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.