ಗೌರಿ ಲಂಕೇಶ್ ಹತ್ಯೆ ಅತ್ಯಂತ ಹ್ಯೇಯ ಕೃತ್ಯ

ಗೌರಿ ಲಂಕೇಶ್ ಹತ್ಯೆಗೆ ಸಂತಾಪ ವ್ಯಕ್ತಪಡಿಸಿದ ಕೇಂದ್ರ ಸಚಿವ ಅನಂತ್ ಕುಮಾರ್.

Last Updated : Sep 6, 2017, 04:31 PM IST
ಗೌರಿ ಲಂಕೇಶ್ ಹತ್ಯೆ ಅತ್ಯಂತ ಹ್ಯೇಯ ಕೃತ್ಯ title=

ನವ ದೆಹಲಿ: ಸಾಹಿತಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡುರುವ ಕೇಂದ್ರ ಸಚಿವ ಅನಂತ್ ಕುಮಾರ್ ಇದೊಂದು ಅತ್ಯಂತ ಹೀನ ಕೃತ್ಯ ಎಂದು ಖಂಡಿಸಿದ್ದಾರೆ. 

ರಾಜ್ಯ ಸರ್ಕಾರದಲ್ಲಿ ನನ್ನದು ಒಂದೇ ಮನವಿ ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕ ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಸೆರೆಹಿಡಿಯಲಿ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ, ಹಿಂದಿನ ಘಟನೆಗಳಲ್ಲೂ(ಎಂ ಎಂ ಕುಲಕರ್ಣಿ) ಅಪರಾಧಿಗಳನ್ನು ಹಿಡಿದಿಲ್ಲ ಎಂದು ತಿಳಿಸಿದ ಅನಂತ್ ಕುಮಾರ್ ಗೌರಿ ಲಂಕೇಶ್ ಹತ್ಯೆಗೆ ಸಂತಾಪ ವ್ಯಕ್ತಪಡಿಸಿದರು.

Trending News