ಕೊಪ್ಪಳ: ಗ್ರಾಮ ಪಂಚಾಯತ್ ಕಾರ್ಯಾಲಯದ ಕಂಪ್ಯೂಟರ್ ಆಪರೇಟರ್ ವಿಠ್ಠಲ್ ತಂದೆ ವೀರಣ್ಣಶೆಟ್ಟಿ ಅವರು ಲಂಚದ ಹಣ 15,000 ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ದಲಿತರು, ಹಿಂದುಳಿದವರು ಭಿಕ್ಷುಕರೇ?: ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು


ಮನೆ ಸ್ವತ್ತಿಗೆ ನಮೂನೆ 9 ನೀಡಲು ಕುಕನೂರು ತಾಲೂಕಿನ ನೆಲಜೇರಿ ಗ್ರಾಪಂ ಪಿಡಿಓ ಆನಂದ ಎಲಿಗಾರ ಅವರ ಸೂಚನೆಯಂತೆ ಕಂಪ್ಯೂಟರ್ ಆಪರೇಟರ್ ವಿಠ್ಠಲ್ ತಂದೆ ವೀರಣ್ಣಶೆಟ್ಟಿ ಅವರು 20 ಸಾವಿರ ರೂ.ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಚೌಕಾಸಿ ನಂತರ 15 ಸಾವಿರ ಲಂಚದ ಹಣಕ್ಕೆ ಒಪ್ಪಿಕೊಂಡು ಕುದರಿಮೋತಿ ಗ್ರಾಪಂ ಕಾರ್ಯಾಲಯದಲ್ಲಿ ದೂರುದಾರರಿಂದ ಲಂಚದ ಹಣ ಪಡೆದುಕೊಂಡು ಟ್ರಾಪ್‌ಗೆ ಒಳಗಾಗಿದ್ದಾರೆ.


ಇದನ್ನೂ ಓದಿ: ಮೇ.10 ರಂದು ಮತದಾನ ಮಾಡಲು ಕಾರ್ಮಿಕರಿಗೆ ವೇತನ ಸಹಿತ ರಜೆ


ರಾಯಚೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಪ್ರಕರಣವನ್ನು ಭೇದಿಸಿರುತ್ತಾರೆ.


ಈ ಬಗ್ಗೆ ಕೊಪ್ಪಳ ಲೋಕಾಯುಕ್ತ ಠಾಣೆಯಲ್ಲಿ ಗುನ್ನೆ ನಂ. 04/2023 ರಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ ಎಂದು ಕರ್ನಾಟಕ ಲೋಕಾಯುಕ್ತ ರಾಯಚೂರು ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3Lw