ಬಳ್ಳಾರಿ : ಶಾಲಾ ಶಿಕ್ಷಕಿಯೊಬ್ಬರಿಗೆ ಅದ್ಧೂರಿಯಾಗಿ ಊರಿನ ಜನರು ಬೀಳ್ಕೊಡುಗೆ ನೀಡಿರುವ ಅಪರೂಪದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕುರುವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರ ಈ ಕಾರ್ಯಕ್ಕೆ ಜನರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ. 


COMMERCIAL BREAK
SCROLL TO CONTINUE READING

ಹೌದು.. ಬಹುಶಃ ಈ ಸರ್ಕಾರಿ ಶಾಲೆಯ ಶಿಕ್ಷಕಿಗೆ ಸಿಕ್ಕ ಅದ್ದೂರಿ ಬೀಳ್ಕೊಡಿಗೆ ಯಾವ ಐಎಎಸ್, ಐಪಿಎಸ್‌ ಅಧಿಕಾರಿಗೂ ಸಿಕ್ಕಿರಲಿಕ್ಕಿಲ್ಲ ಅನಿಸುತ್ತದೆ. ಇದು ಶಿಕ್ಷಕಿ, ಮಕ್ಕಳು ಹಾಗೂ ಗ್ರಾಮಸ್ಥರ ಅವಿನಾಭಾವಕ್ಕೆ ಸಾಕ್ಷಿಯಾದ ಕ್ಷಣ. ಈ ಅಪರೂಪದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕುರುವಳ್ಳಿ ಗ್ರಾಮದಲ್ಲಿ ನಡದಿದೆ.


ಇದನ್ನೂ ಓದಿ: ನಮ್ಮ ಹೆಸರಲ್ಲಿ ನೈಸ್ ಆಸ್ತಿ ಇದ್ದರೆ ಇಡೀ ಕುಟುಂಬವೇ ರಾಜಕೀಯ ನಿವೃತ್ತಿ: ಎಚ್.ಡಿ.ಕುಮಾರಸ್ವಾಮಿ


ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಅವರು ಸುಮಾರು 15 ವರ್ಷಗಳಿಂದ ಕುರುವಳ್ಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರು ವರ್ಗಾವಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಷರ ಕಲಿಸಿದ ಗುರುವಿಗೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸೇರಿ ಅದ್ಧೂರಿಯಾಗಿ ಬೀಳ್ಕೊಡುಗೆ ನೀಡಿದ್ದಾರೆ.


ನೆಚ್ಚಿನ ಶಿಕ್ಷಕಿ ದೂರವಾಗುತ್ತಿರುವ ಹಿನ್ನೆಲೆ ಮಕ್ಕಳು ಕಣ್ಣೀರು ಹಾಕಿದರು. ಶಿಕ್ಷಕಿ ಜ್ಯೋತಿಯವರು ಸಹ ಕಂಬನಿ ಮಿಡಿದರು. ಶಿಕ್ಷಕಿಯನ್ನ ಬೆಳ್ಳಿ ರಥದಲ್ಲಿ ಕೂರಿಸಿ ಗ್ರಾಮಸ್ಥರು ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ಮಹಿಳೆಯರು, ಮಕ್ಕಳು ಪೂರ್ಣ ಕುಂಭ ಹೊತ್ತು ಮೆರವಣಿಗೆಗೆ ಸಾಕ್ಷಿಯಾದರು. ಡೊಳ್ಳು ಕುಣಿತ, ಹೂಮಳೆಗೈದು ಮೆಚ್ಚಿನ ಶಿಕ್ಷಕಿಗೆ ಅರ್ಥಪೂರ್ಣವಾಗಿ ಬೀಳ್ಕೊಡುಗೆ ನೀಡಲಾಯಿತು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.