ಮಂಡ್ಯ : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಸಾವಿಗೀಡಾದವರಲ್ಲಿ ಕನ್ನಡಿಗರೂ ಸೇರಿದ್ದಾರೆ. ಇದೀಗ ಮಂಡ್ಯ ಮೂಲದ ಅಜ್ಜಿ-ಮೊಮ್ಮಗ ಮೃತಪಟ್ಟಿದ್ದಾರೆ ಎನ್ನುವುದು ದೃಢಪಟ್ಟಿದೆ. ದುರಂತದಲ್ಲಿ ಮಂಡ್ಯ ಮೂಲದ ಇಬ್ಬರು ನಾಪತ್ತೆಯಾಗಿದ್ದರು.ಇದೀಗ ನಾಪತ್ತೆಯಾಗಿದ್ದ ಅಜ್ಜಿ,ಮೊಮ್ಮಗನ ಮೃತ ದೇಹ ಪತ್ತೆಯಾಗಿದೆ. 


COMMERCIAL BREAK
SCROLL TO CONTINUE READING

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮಂಡ್ಯ ಮೂಲದ ಒಂದೇ ಕುಟುಂಬದ ಐವರು ನಾಪತ್ತೆಯಾಗಿದ್ದರು. ಈ ಪೈಕಿ ಅನಿಲ್,ಪತ್ನಿ ಝಾನ್ಸಿರಾಣಿ, ದೇವರಾಜ್ ಪತ್ತೆಯಾಗಿದ್ದು, ಅವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು. ಆದರೆ ಪುಟಾಣಿ ನಿಹಾಲ್, ಮತ್ತು ಅಜ್ಜಿ ಇದೀಗ ಶವವಾಗಿ ಪತ್ತೆಯಾಗಿದ್ದಾರೆ. 


ಇದನ್ನೂ ಓದಿ : ಪಾದಯಾತ್ರೆ ಪರವಾನಗಿ ಇಲ್ಲ ಎಂಬ ಹೇಳಿಕೆ ವಿಚಾರ


ಇಬ್ಬರ ಮೃತದೇಹ ಪತ್ತೆಯಾಗಿರುವ ಸುಡಿ ಕೇಳಿ ಮೃತರ ನಿವಾಸದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟದಲ್ಲಿ    ಶೋಕ ಮಡುಗಟ್ಟಿದೆ. 


ಈ ಮಧ್ಯೆ, ಘಟನೆಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು,ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಹೇಳಿದ್ದಾರೆ. 


 


ಬಿಜೆಪಿ ದಲಿತ ವಿರೋಧಿಗಳು.. ಅವರಿಗೆ ಉದ್ಧಾರ ಬೇಕಿಲ್ಲ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ