ರಾಜಕೀಯ ಚಟುವಟಿಕೆಗಳಲ್ಲಿ ದಿವ್ಯಾಂಗರಿಗೆ ಹೆಚ್ಚಿನ ಪ್ರಾಶಸ್ತ್ಯ ಹಾಗೂ ಗೌರವ: ಭಾರತೀಯ ಚುನಾವಣಾ ಆಯೋಗದಿಂದ ವಿಶೇಷ ಮಾರ್ಗಸೂಚಿ

ಪ್ರಜಾಪ್ರಭುತ್ವದ ತಳಹದಿಯಾದ ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲಾ ಸಮುದಾಯಗಳಿಗೆ ಪ್ರಾತಿನಿಧ್ಯವಿದ್ದು, ಅದರಂತೆ ದಿವ್ಯಾಂಗರಿಗೆ ಚುನಾವಣಾ ಪ್ರಕ್ರಿಯೆಯಲ್ಲಿ ಸಮಾನವಾಗಿ ಭಾಗವಹಿಸುವಿಕೆಯನ್ನು ಭಾರತೀಯ ಚುನಾವಣಾ ಆಯೋಗವು ಪ್ರೋತ್ಸಾಹಿಸುತ್ತದೆ ಎಂದು ಭಾರತ ಚುನಾವಣಾ ಆಯೋಗ ತಿಳಿಸಿದೆ.

Written by - Manjunath N | Last Updated : Dec 21, 2023, 08:44 PM IST
  • ಹೊಂದಲು ಮತದಾರರನ್ನು ಪ್ರೊತ್ಸಾಹಿಸುವ ಪ್ರಯತ್ನವಾಗಿದ್ದರೂ, ಆಯೋಗವು ಮನೆಯಲ್ಲೇ ಮತದಾನದ ಸೌಲಭ್ಯವನ್ನು ಪರಿಚಯಿಸಿದೆ
  • ಶೇ.40ರಷ್ಟು ಅಂಗವೈಕಲ್ಯ ಹೊಂದಿರುವ ವಿಶೇಷಚೇತನ ಮತದಾರರು ಈ ಸೌಲಭ್ಯವನ್ನು ಪಡೆಯಲು ಆಯ್ಕೆ ಮಾಡಬಹುದು
  • ಇತ್ತೀಚಿನ ಚುನಾವಣೆಗಳಲ್ಲಿ ಈ ಸೌಲಭ್ಯದ ಜನಪ್ರಿಯತೆ ಹೆಚ್ಚುತ್ತಿದ್ದು, ಸಮುದಾಯದ ಮೆಚ್ಚುಗೆಗೆ ಪಾತ್ರವಾಗಿದೆ
ರಾಜಕೀಯ ಚಟುವಟಿಕೆಗಳಲ್ಲಿ ದಿವ್ಯಾಂಗರಿಗೆ ಹೆಚ್ಚಿನ ಪ್ರಾಶಸ್ತ್ಯ ಹಾಗೂ ಗೌರವ: ಭಾರತೀಯ ಚುನಾವಣಾ ಆಯೋಗದಿಂದ ವಿಶೇಷ ಮಾರ್ಗಸೂಚಿ title=

ಬೆಂಗಳೂರು: ಪ್ರಜಾಪ್ರಭುತ್ವದ ತಳಹದಿಯಾದ ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲಾ ಸಮುದಾಯಗಳಿಗೆ ಪ್ರಾತಿನಿಧ್ಯವಿದ್ದು, ಅದರಂತೆ ದಿವ್ಯಾಂಗರಿಗೆ ಚುನಾವಣಾ ಪ್ರಕ್ರಿಯೆಯಲ್ಲಿ ಸಮಾನವಾಗಿ ಭಾಗವಹಿಸುವಿಕೆಯನ್ನು ಭಾರತೀಯ ಚುನಾವಣಾ ಆಯೋಗವು ಪ್ರೋತ್ಸಾಹಿಸುತ್ತದೆ ಎಂದು ಭಾರತ ಚುನಾವಣಾ ಆಯೋಗ ತಿಳಿಸಿದೆ.

ಈ ಕುರಿತಂತೆ ವಿಶೇಷ ಪ್ರಕಟಣೆ ನೀಡಿರುವ ಆಯೋಗ ವಿಶೇಷ ಚೇತನ ಸಮುದಾಯದ ಬಗ್ಗೆ ರಾಜಕೀಯವಾಗಿ ಒಳಗೊಳ್ಳುವಿಕೆ ಮತ್ತು ಗೌರವವನ್ನು ಉತ್ತೇಜಿಸಲು, ಚುನಾವಣಾ ಆಯೋಗವು ರಾಜಕೀಯ ಪಕ್ಷಗಳು ಮತ್ತು ಅವರ ಪ್ರತಿನಿಧಿಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ನೀಡಿದೆ.ರಾಜಕೀಯ ಪಕ್ಷಗಳು ಮತ್ತು ಅವರ ಅಭ್ಯರ್ಥಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಪ್ರಮುಖ ಪಾಲುದಾರರಾಗಿರುವುದರಿಂದ ದಿವ್ಯಾಂಗ ಮತದಾರರ ಕುರಿತು ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಒಳಗೊಂಡ ಆದೇಶವನ್ನು ಹೊರಡಿಸಲಾಗಿದೆ.

ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ

ಈಗಾಗಲೇ ಆಯೋಗವು ವಿಶೇಷಚೇತನ ವ್ಯಕ್ತಿಗಳ ಬಗ್ಗೆ ರಾಜಕೀಯ ಭಾಷಣದಲ್ಲಿ ಅವಹೇಳನಕಾರಿ ಪದಗಳನ್ನು ಬಳಸುವ ಅಥವಾ ಆಕ್ಷೇಪಾರ್ಹ ಭಾಷೆ ಬಳಕೆಯ ಬಗ್ಗೆ ರಾಜಕೀಯ ಪಕ್ಷಗಳಿಗೆ ಆಯೋಗವು ಅರಿವು ಮೂಡಿಸುತ್ತಿದೆ.

ಯಾವುದೇ ರಾಜಕೀಯ ಪಕ್ಷಗಳ ಸದಸ್ಯರು ಅಥವಾ ಅವರ ಅಭ್ಯರ್ಥಿಗಳು ಭಾಷಣ, ಪ್ರಚಾರದಲ್ಲಿ ದಿವ್ಯಾಂಗರಿಗೆ ಧಕ್ಕೆ ತರುವಂತಹ ಭಾಷೆಯನ್ನು ಬಳಸುವಂತಿಲ್ಲ. ಉದಾಹರಣೆಗೆ ಮೂಕ (ಗುಂಗಾ), ರಿಟಾರ್ಡೆಡ್ (ಪಾಗಲ್, ಸಿರ್ಫಿರಾ), ಕುರುಡು (ಅಂಧ, ಕನಾ), ಕಿವುಡ (ಬೆಹ್ರಾ), ಕುಂಟ (ಲಂಗ್ಡಾ, ಲೂಲಾ, ಅಪಹಿಜ್) ಮುಂತಾದ ಪದಗಳ ಬಳಕೆ ಮಾಡುವಂತಿಲ್ಲ. ಅಂಗವಿಕಲರಿಗೆ ನ್ಯಾಯ ಮತ್ತು ಗೌರವವನ್ನು ನೀಡಬೇಕು ಎಂಬ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು ಮಾರ್ಗಸೂಚಿ ಪ್ರಕಟಿಸಿದೆ.

ಮಾರ್ಗಸೂಚಿಗಳು:

ರಾಜಕೀಯ ಪಕ್ಷಗಳು ಮತ್ತು ಅವರ ಪ್ರತಿನಿಧಿಗಳು ತಮ್ಮ ಬರಹಗಳು, ಲೇಖನಗಳು ಸೇರಿದಂತೆ ಪ್ರಚಾರದ ಸಂದರ್ಭಗಳಲ್ಲಿ ಅಥವಾ ರಾಜಕೀಯ ಪ್ರಚಾರದಲ್ಲಿ ಯಾವುದೇ ಸಾರ್ವಜನಿಕ ಹೇಳಿಕೆ, ಭಾಷಣದ ಸಮಯದಲ್ಲಿ ದಿವ್ಯಾಂಗರ ಅಂಗವೈಕಲ್ಯ ಅಥವಾ ಅಂಗವಿಕಲತೆಯನ್ನು ಆಡಿಕೊಳ್ಳುವ, ಅವಹೇಳನಕಾರಿ, ಅವಮಾನಕರ ಪದಗಳನ್ನು ಬಳಸಬಾರದು.

ರಾಜಕೀಯ ಪಕ್ಷಗಳು ಮತ್ತು ಪಕ್ಷದ ಪ್ರತಿನಿಧಿಗಳು ದಿವ್ಯಾಂಗರ ಅಂಗವಿಕಲತೆ, ಭಾಷೆ, ಪರಿಭಾಷೆ, ಸಂದರ್ಭ, ಅಪಹಾಸ್ಯ, ಅವಹೇಳನಕಾರಿ ಉಲ್ಲೇಖಗಳು ಮತ್ತು ಅವರನ್ನು ಅವಮಾನಿಸುವ ಯಾವುದೇ ರೀತಿಯ ಬಳಕೆಯು 2016 ರ ದಿವ್ಯಾಂಗರ ಹಕ್ಕುಗಳ ಕಾಯಿದೆಯ ಸೆಕ್ಷನ್ 92ರಡಿ ನಿಬಂಧನೆಗಳಿಗೆ ಒಳಪಡುತ್ತಾರೆ.

ರಾಜಕೀಯ ಪಕ್ಷಗಳು ದಿವ್ಯಾಂಗರ ಕುರಿತು ತಮ್ಮ ಪಕ್ಷಗಳ ಮಟ್ಟದಲ್ಲಿ ಪರಿಶೀಲಿಸಿ ಅಂಗೀಕರಿಸಲ್ಪಟ್ಟ ನಂತರ ಭಾಷಣ ಅಥವಾ ವಿಷಯವನ್ನು ಪ್ರಚುರಪಡಿಸುವುದು ಉತ್ತಮ.

ಎಲ್ಲಾ ರಾಜಕೀಯ ಪಕ್ಷಗಳು ರಾಜಕೀಯ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ದಿವ್ಯಾಂಗರ ಕುರಿತು ತರಬೇತಿ ಮಾಡ್ಯೂಲ್‍ಅನ್ನು ಒದಗಿಸಬಹುದು ಮತ್ತು ಸಮರ್ಥ ಭಾಷೆಯ ಬಳಕೆಗೆ ಸಂಬಂಧಿಸಿದಂತೆ ದಿವ್ಯಾಂಗ ವ್ಯಕ್ತಿಗಳಿಂದ ದೂರುಗಳನ್ನು ಕೇಳಲು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು.

ಪಕ್ಷ ಮತ್ತು ಸಾರ್ವಜನಿಕರ ವರ್ತನೆಯ ತಡೆಗೋಡೆಯನ್ನು ತೊಡೆದುಹಾಕಲು ಮತ್ತು ಸಮಾನ ಅವಕಾಶಗಳನ್ನು ಒದಗಿಸಲು ರಾಜಕೀಯ ಪಕ್ಷಗಳು ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರಂತಹ ಹಂತಗಳಲ್ಲಿ ಹೆಚ್ಚಿನ ದಿವ್ಯಾಂಗರನ್ನು ಸೇರಿಸಿಕೊಳ್ಳ ಬಹುದಾಗಿದೆ.

ಮತದಾನ ಕೇಂದ್ರಗಳಲ್ಲಿ ವಿಶೇಷ ಸ್ಥಾನಮಾನ:

ದಿವ್ಯಾಂಗರು ತಮ್ಮ ಮತ ಚಲಾಯಿಸಲು ಮತದಾನ ಕೇಂದ್ರಗಳಲ್ಲಿ ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಚುನಾವಣಾ ಆಯೋಗವು ಮಾರ್ಗದರ್ಶಿ ಸೂತ್ರಗಳು ಮತ್ತು ಸೌಲಭ್ಯಗಳನ್ನು ಕಾಲ-ಕಾಲಕ್ಕೆ ವಿಸ್ತರಿಸುತ್ತಿದೆ ಹಾಗೂ ಉತ್ತಮಗೊಳಿಸುತ್ತಿದೆ.

ನೆಲ ಮಹಡಿಯಲ್ಲಿ ಮತದಾನ ಕೇಂದ್ರದ ಸ್ಥಾಪನೆ, ಇವಿಎಂನ ಬ್ಯಾಲೆಟ್ ಯೂನಿಟ್‍ನಲ್ಲಿ ಬ್ರೈಲ್ ಚಿಹ್ನೆಗಳು, ಸರಿಯಾದ ಗ್ರೇಡಿಯಂಟ್‍ನೊಂದಿಗೆ ರ್ಯಾಂಪ್‍ಗಳ ನಿರ್ಮಾಣ, ದಿವ್ಯಾಂಗರಿಗಾಗಿ ಪ್ರತ್ಯೇಕ ಸರತಿ ಸಾಲುಗಳು (ಆದ್ಯತಾ ಪ್ರವೇಶ), ವೀಲ್‍ಚೇರ್‍ಗಳು, ಅವಶ್ಯಕತೆ ಇರುವ ದಿವ್ಯಾಂಗರ ಸಹಾಯಕ್ಕಾಗಿ ಜೊತೆಯಲ್ಲಿ ಒಡನಾಡಿಗೆ ಅನುಮತಿ ನೀಡುವುದು. ದಿವ್ಯಾಂಗರು ಪ್ರವೇಶಿಸಬಹುದಾದ ವಿಶೇಷ ಶೌಚಾಲಯಗಳು ಸೇರಿದಂತೆ ಮತದಾನದ ಪ್ರಕ್ರಿಯೆಯನ್ನು ವಿವರಿಸುವ ಸಾಕಷ್ಟು ಫಲಕಗಳು ಇತ್ಯಾದಿ ಕ್ರಮಗಳನ್ನು ಕೈಗೊಂಡಿದೆ.

ಮತದಾರರು ಮತಗಟ್ಟೆಗೆ ಬರಲು ಮತ್ತು ಸುರಕ್ಷಿತ, ಆರಾಮದಾಯಕ ಮತ್ತು ಆಹ್ಲಾದಕರ ಮತದಾನದ ಅನುಭವವನ್ನು ಹೊಂದಲು ಮತದಾರರನ್ನು ಪ್ರೊತ್ಸಾಹಿಸುವ ಪ್ರಯತ್ನವಾಗಿದ್ದರೂ, ಆಯೋಗವು ಮನೆಯಲ್ಲೇ ಮತದಾನದ ಸೌಲಭ್ಯವನ್ನು ಪರಿಚಯಿಸಿದೆ. ಶೇ.40ರಷ್ಟು ಅಂಗವೈಕಲ್ಯ ಹೊಂದಿರುವ ವಿಶೇಷಚೇತನ ಮತದಾರರು ಈ ಸೌಲಭ್ಯವನ್ನು ಪಡೆಯಲು ಆಯ್ಕೆ ಮಾಡಬಹುದು. ಇತ್ತೀಚಿನ ಚುನಾವಣೆಗಳಲ್ಲಿ ಈ ಸೌಲಭ್ಯದ ಜನಪ್ರಿಯತೆ ಹೆಚ್ಚುತ್ತಿದ್ದು, ಸಮುದಾಯದ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಪ್ರಕಟಣೆ ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ರಣತಂತ್ರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News