ಬೆಂಗಳೂರು: ಆಗಸ್ಟ್‌ 16ರಿಂದ  ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ‘ಗೃಹಲಕ್ಷ್ಮಿ’ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಯ ಖಾತೆಗೆ ಮಾಸಿಕ 2 ಸಾವಿರ ರೂ. ಜಮಾ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.   


COMMERCIAL BREAK
SCROLL TO CONTINUE READING

‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳ ನೋಂದಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆಗೂ ಮುನ್ನ ನಾವು ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಈ ಯೋಜನೆಗಳ ಅನುಷ್ಠಾನದಿಂದ ರಾಜ್ಯವು ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ ಎಂಬ ಮಾತುಗಳನ್ನು ಕೆಲವರು ಆಡುತ್ತಿದ್ದಾರೆ. ಅಂತಹ ಮಾತುಗಳಿಗೆ ಯಾವ ಬೆಲೆಯೂ ಇಲ್ಲ’ವೆಂದು ಕಿಡಿಕಾರಿದರು.


ಇದನ್ನೂ ಓದಿ: ಕುಸಿದು ಬಿದ್ದು ಆಸ್ಪತ್ರೆಗೆ ದಾಖಲು: ಯತ್ನಾಳ್ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ!


‘ನಮ್ಮದು ಕೊಟ್ಟ ಮಾತಿನಂತೆ ನಡೆಯುವ ಸರ್ಕಾರ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಘೋಷಿಸಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ನಾವು ಬದ್ಧರಾಗಿದ್ದೇವೆ. ನಮ್ಮ ಉತ್ತಮ ಯೋಜನೆಗಳನ್ನು ಸಹಿಸದೆ ಬಿಜೆಪಿ ಸೇರಿದಂತೆ ವಿಪಕ್ಷಗಳು ಅಪಪ್ರಚಾರ ಮಾಡುತ್ತಿದೆ. ನಾವು ಇದಕ್ಕೆ ಸೊಪ್ಪು ಹಾಕದೆ ಯೋಜನೆಗಳನ್ನು ಜಾರಿಗೊಳಿಸುತ್ತೇವೆ’ ಎಂದು ಹೇಳಿದರು.


ಇನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿಗೆ ಸಲಹೆ ಪಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಉಚಿತ ಸಹಾಯವಾಣಿ ಆರಂಭಿಸಲಾಗಿದೆ. ದೂರವಾಣಿ ಸಂಖ್ಯೆ 1902ಕ್ಕೆ ಕರೆಮಾಡಿ ನೀವು ಸಹ ನೆರವು ಪಡೆಯಬಹುದು. ರಾಜ್ಯದಲ್ಲಿ ಒಟ್ಟು1.28 ಕೋಟಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿದ್ದಾರೆ. ತಿಂಗಳಿಗೆ ತಲಾ  2 ಸಾವಿರ ರೂ.ನಂತೆ ಪ್ರತಿ ಫಲಾನುಭವಿಗೆ ಈ ಯೋಜನೆಯಡಿ ವರ್ಷಕ್ಕೆ 24 ಸಾವಿರ ರೂ. ಸಿಗಲಿದೆ.


ಇದನ್ನೂ ಓದಿಮಸೂದೆಗಳ ಪ್ರತಿಗಳನ್ನು ಹರಿದು ಉಪ ಸಭಾಧ್ಯಕ್ಷರ ಮೇಲೆ ಎಸದು ಅಗೌರವ ತೋರಿದ ಬಿಜೆಪಿ ಸದಸ್ಯರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.