ತುಮಕೂರು : ಸಂಸದ ಪ್ರಜ್ವಲ್‌ ರೇವಣ್ನ ನನಗೆ ಆತ್ಮೀಯ ಸ್ನೇಹಿತ, ಆ ನೇಚರ್ ಇರುವಂತಹ ಹುಡುಗ ಅಲ್ಲ ಆತ. ಏನು ಗ್ರಹಚಾರವೋ, ಯಾರ ಕೈವಾಡವೋ ಗೊತ್ತಿಲ್ಲ ಎಂದು ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ಸಂಸದ ಜಿ.ಎಸ್‌. ಬಸವರಾಜು ಪ್ರತಿಕ್ರಿಯೆ ನೀಡಿದರು.


COMMERCIAL BREAK
SCROLL TO CONTINUE READING

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಪ್ರಜ್ವಲ್ ರೇವಣ್ಣ ಪ್ರಕರಣ ಸತ್ಯನೋ- ಸುಳ್ಳೋ ಸಾಬೀತು ಆಗಲಿ. ಅವರು, ನನಗೆ ಆತ್ಮೀಯ ಸ್ನೇಹಿತ, ಆ ನೇಚರ್ ಇರುವಂತಹ ಹುಡುಗ ಅಲ್ಲ ಆತ, ಏನು ಗ್ರಹಚಾರವೋ, ಯಾರ ಕೈವಾಡವೋ ಗೊತ್ತಿಲ್ಲ ಎಂದರು..


ಇದನ್ನೂ ಓದಿ:ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ


ಅಲ್ಲದೆ, ಇತ್ತೀಚೆಗೆ ಈ ರೀತಿ ತೇಜೋವಧೆ ಮಾಡುವುದು ಹೆಚ್ಚಾಗಿದೆ. ಜಾರಕಿಹೋಳಿಗೂ ಕೂಡ ಪಿತೂರಿ ಮಾಡಿ ಮನೆ ಹಾಳು ಮಾಡಿ ಮಾನ -ಮರ್ಯಾದೆ ಹರಾಜು ಹಾಕಿದ್ದಾರೆ. ಜಾರಕಿಹೋಳಿಗೆ ವಿರೋಧ ಪಕ್ಷದವರೇ ಪಿತೂರಿ ಮಾಡಿದರು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿಯೂ ಅನುಮಾನ ಹೊರ ಹಾಕಿದ ಜಿ.ಎಸ್ ಬಸವರಾಜು.


ಈಗಲೂ ಕೂಡ ವಿರೋಧ ಪಕ್ಷದವರೇ ಪಿತೂರಿ ಮಾಡಿರಬಹುದು. ಒಂದು ವೇಳೆ ಮಹಿಳೆಯರಿಗೆ ಅನ್ಯಾಯ ಆಗಿದ್ದರೆ ಶಿಕ್ಷೆ ಆಗಲೇಬೇಕು ಎಂದು ಬಸವರಾಜ್‌ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ತಮ್ಮ ಅಭಿಪ್ರಾಯವನ್ನು ಹೊರ ಹಾಕಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.