ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕಂದೇಗಾಲದ ಸ್ಕಂದಗಿರಿ ಪಾರ್ವತಾಂಭ ರಥೋತ್ಸವವು ಗುರುವಾರದಂದು ವೈಭವದಿಂದ ನಡೆಯಿತು. ಪುರಾಣ ಐತಿಹ್ಯದ ಕ್ಷೇತ್ರವಾಗಿರುವ ಪಾರ್ವತಿ ಬೆಟ್ಟದಲ್ಲಿ ವರ್ಷಕ್ಕೊಮ್ಕೆ ನಡೆಯುವ ರಥೋತ್ಸವಕ್ಕೆ ಸಹಸ್ರಾರು ಮಂದಿ ಪಾಲ್ಗೊಂಡು ತೇರು ಎಳೆದು ಪುನೀತರಾದರು.


COMMERCIAL BREAK
SCROLL TO CONTINUE READING

ದೇವಸ್ಥಾನ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಹಿನ್ನಲೆ  ತಾಲೂಕು ಆಡಳಿತದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿತ್ತು.  ಕಳೆದ ಎರಡು ವರ್ಷದ ಹಿಂದೆ ರಥೋತ್ಸವದ ಸಂದರ್ಭದಲ್ಲಿ ಚಕ್ರಕ್ಕೆ ಸಿಲುಕಿ ಕಂದೇಗಾಲ ಗ್ರಾಮದ ಸರ್ಪಭೂಷಣ್ ಹಾಗು ಕಬ್ಬಹಳ್ಳಿ ಗ್ರಾಮದ ಸ್ವಾಮಿ ಎಂಬ ಇಬ್ಬರು ಯುವಕರು ಮೃತ ಪಟ್ಟಿದ್ದರಿಂದ ಜಿಲ್ಲಾಡಳಿತವು ರಥೋತ್ಸವದ ವೇಳೆ ಯಾವುದೇ ಅಹಿತರಕರ ಘಟನೆ ಜರುಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಒಗದಿಸಿತ್ತು. 


ಇದನ್ನೂ ಓದಿ:ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರು ಮೌನ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ


ರಥೋತ್ಸವಕ್ಕೆ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ, ಶಿಂಡನಪುರ, ಕೊಡಸೋಗೆ, ಸೋಮನಪುರ, ಬೊಮ್ಮಲಾಪುರ, ತೆರಕಣಾಂಬಿ ಸೇರಿದಂತೆ ನೆರೆ ಜಿಲ್ಲೆಗಳಿಂದಲೂ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.