ಬೆಳ್ತಂಗಡಿ: ಮಂಗಳೂರು ಸಮೀಪದ ಧರ್ಮಸ್ಥಳದ ಶಾಂತಿವನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಮಂಗಳವಾರ ಭೇಟಿಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಭಾರಿ ಮಳೆಯಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದ ಚಾರ್ಮಾಡಿ ಘಾಟ್ ರಸ್ತೆ ಪರಿಶೀಲಿಸಿದ ಹೆಚ್.ಡಿ.ರೇವಣ್ಣ ಅವರು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. 


ನಂತರ ಧರ್ಮಸ್ಥಳದ ಶಾಂತಿವನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಇಬ್ಬರು ನಾಯಕರು ಭೇಟಿಯಾಗಿದ್ದಾರೆ. ಆದರೆ, ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಯಾವುದೇ ರಾಜಕೀಯ ಮಾತುಕತೆ ನಡೆಸಿಲ್ಲ ಎಂದು ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ.


ವಿಧಾನಸಭೆ ಚುನಾವಣೆಯಿಂದಾಗಿ ಆಗಿರುವ ಆಯಾಸ ಕಳೆಯಲು ಹಾಗೂ ಪ್ರಕೃತಿ ಚಿಕಿತ್ಸೆಯನ್ನು ಪಡೆಯಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 17 ರಿಂದ ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೆ ದಾಖಲಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.