ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ದವಾಗುತ್ತಿರುವ ಬೆನ್ನಲ್ಲೇ ಈಗ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷ ಸೇರಲು ಒಲವು ತೋರಿದ್ದಾರೆ.


COMMERCIAL BREAK
SCROLL TO CONTINUE READING

ಇದಕ್ಕೆ ಪೂರಕವಾಗಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ.


ಇದನ್ನೂ ಓದಿ : Assembly Election Result 2022 : ಗುಜರಾತ್‌ನಲ್ಲಿ 1985 ರ ಕಾಂಗ್ರೆಸ್‌ ದಾಖಲೆ ಮುರಿದ ಬಿಜೆಪಿ!


ಸದಾಶಿವನಗರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅವರು ಭೇಟಿ ಮಾಡಿದರು.ಇತ್ತೀಚಿಗಷ್ಟೇ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷದ ಸೇರ್ಪಡೆ ವಿಚಾರವನ್ನು ಪ್ರಸ್ತಾಪಿಸಿದ್ದರು.ಈ ಸಂದರ್ಭದಲ್ಲಿ ಅವರು ರಾಜ್ಯ ನಾಯಕರನ್ನು ಭೇಟಿ ಮಾಡಿ ಬನ್ನಿ ಎನ್ನುವ ಸಲಹೆ ನೀಡಿದ್ದರು ಎನ್ನಲಾಗಿದೆ.


ಇದನ್ನೂ ಓದಿ : Gujarat Election Result 2022 : ರವೀಂದ್ರ ಜಡೇಜಾ ಪತ್ನಿ ಭರ್ಜರಿ ಗೆಲವು!


ಇದಾದ ಬೆನ್ನಲ್ಲೇ ಅವರು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ್ದರು.ಇಂದು ಅವರು ಅವರು ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿದ್ದಾರೆ.ಈ ಭೇಟಿ ಬೆನ್ನಲ್ಲೇ ಅವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.