ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ಮತ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


COMMERCIAL BREAK
SCROLL TO CONTINUE READING

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಾಳೆ  ಹಾನಗಲ್‍(Hanagal)ನಲ್ಲಿ ಉದಾಸಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.


ಇದನ್ನೂ ಓದಿ : KCET 2021 Exam ಪರಿಷ್ಕೃತ 'ಟೈಮ್ ಟೇಬಲ್' ಪ್ರಕಟ!


1983 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಪಡೆದಿದ್ದರು. ಈ ಹಿಂದೆ ಯಡಿಯೂರಪ್ಪ(BS Yediyurappa) ರವರ ಸರ್ಕಾರದಲ್ಲಿ ಸಚಿವರಾಗಿದ್ದರು.ಆರು ಬಾರಿ ಹಾನಗಲ್ ಕ್ಷೇತ್ರದಲ್ಲಿ ಗೆಲುವು ಪಡೆದಿದ್ದರು.


ಇದನ್ನೂ ಓದಿ : Laxman Savadi : 'ಸದ್ಯಕ್ಕಿಲ್ಲ KSRTC, BMTC ಬಸ್ ಟಿಕೆಟ್ ದರ ಏರಿಕೆ'


ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಉದಾಸಿ(CM Udasi) ಅವರ ಆರೋಗ್ಯ ವಿಚಾರಿಸಿದ್ದರು.


ಇದನ್ನೂ ಓದಿ : Oath Taking Ceremony : ಪ್ರಮಾಣವಚನ ಸ್ವೀಕರಿಸಿದ 'ಬೈ ಎಲೆಕ್ಷನ್' ನಲ್ಲಿ ಗೆದ್ದ ಇಬ್ಬರು ಶಾಸಕರು!


ಬಿಜೆಪಿ(BJP) ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


KCET 2021 Exam Dates : ವೃತ್ತಿಪರ ಕೋರ್ಸ್ ಗಳ ಸಿಇಟಿಗೆ ಮುಹೂರ್ತ ಫಿಕ್ಸ್ : ಆಗಸ್ಟ್ 28, 29ಕ್ಕೆ CET ಪರೀಕ್ಷೆ! 


ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿಯಾಗಿದ್ದ ಅವರು, ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು, ಲೋಕೋಪಯೋಗಿ ಸಚಿವರಾಗಿ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ರಾಜ್ಯದಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದರು. 


ಇದನ್ನೂ ಓದಿ : Heavy Rainfall in Karnataka : ಜೂ. 11 ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ..!


ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 


ಇದನ್ನೂ ಓದಿ : DK Shivakumar : 'ಜನರ ಜೀವದ ಜತೆ ಚೆಲ್ಲಾಟ‌ ಬಿಡಿ, ಇಲ್ಲವೇ ಅಧಿಕಾರ ಬಿಟ್ಟು ಇಳಿಯಿರಿ ಕೆಳಗೆ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ