ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎನ್ನುವುದೇ ಮರೆತುಹೋಗಿದೆ. ಅವರು ಮತ್ತೊಮ್ಮೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮುಗಿಬಿದ್ದಿದ್ದಾರೆ.


COMMERCIAL BREAK
SCROLL TO CONTINUE READING

ಸರಣಿ ಟ್ವೀಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, 'ಸಿದ್ದರಾಮಯ್ಯ ಅವರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸಬಾರದೆಂದು ಇಚ್ಚಿಸಿದ್ದೆ. ಆದರೆ ಚಾಮುಂಡೇಶ್ವರಿಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ. ಅಲ್ಲಿ ಅವರು ಏನಾದರೂ ಹೇಳಿರಲಿ. ಅದರೆ, ಒಳಒಪ್ಪಂದದ ಆರೋಪ, ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ದ್ವಂದ್ವದ ಬಗ್ಗೆ ಮಾತಾಡುವೆ' ಎಂದಿದ್ದಾರೆ. 


Siddaramaiah) ಹೇಳಿದ್ದಾರೆ. ಹಾಗೆ ಒಪ್ಪಂದವಾಗಿದ್ದರೆ, ಅದು ಬಾದಾಮಿಗೂ ಅನ್ವಯಿಸುತ್ತಿರಲಿಲ್ಲವೇ? ಬಾದಾಮಿಯಲ್ಲಿ ಅವರನ್ನು ಗೆಲ್ಲಲು ಬಿಡುತ್ತಿದ್ದೆವೆ? ಎಂದು ಪ್ರಶ್ನಿಸಿದ್ದಾರೆ.


2009-2010ರ 20 ಉಪಚುನಾವಣೆಗಳನ್ನು ಸಿದ್ದರಾಮಯ್ಯ ಒಮ್ಮೆ ಪರಾಮರ್ಶೆ ಮಾಡಲಿ. ಆ ಹೊತ್ತಿನಲ್ಲಿ ತಮ್ಮನ್ನು ಕಾಂಗ್ರೆಸ್‌ ಕಡೆಗಣಿಸಿತ್ತು ಎಂಬ ಕಾರಣಕ್ಕೆ ಅವರು ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಅವರ ಆತ್ಮ ನೆನಪಿಸುತ್ತದೆ. ಅದರ ಪರಿಣಾಮವಾಗಿ ಕಾಂಗ್ರೆಸ್‌ ಎಷ್ಟು ಸ್ಥಾನ ಗೆದ್ದಿತ್ತು ಎಂಬುದನ್ನೂ ಮನದಟ್ಟು ಮಾಡಿಸುತ್ತದೆ ಎಂದು ಹೇಳಿದ್ದಾರೆ.


2013ರ ಚುನಾವಣೆಯತ್ತ ಅವರು ಒಮ್ಮೆ ನೋಡಲಿ. ಆಗ ಅವರು ಯಾರನ್ನೆಲ್ಲ ಸೋಲಿಸಿದ್ದರು, ಕೊರಟಗೆರೆಯಲ್ಲಿ ಯಾರೊಂದಿಗೆ ಒಳಒಪ್ಪಂದ ಮಾಡಿಕೊಂಡು, ಯಾರ ಭವಿಷ್ಯವನ್ನು ಕತ್ತಲಲ್ಲಿಟ್ಟಿದ್ದರು ಎಂಬುದನ್ನು ಮನನ ಮಾಡಿಕೊಳ್ಳಲಿ. 2013ರ ಚುನಾವಣೆಯನ್ನು ಪರಾಮರ್ಶಿಸಿದರೆ, ಪಕ್ಷದ್ರೋಹದ ಆಧಾರದ ಮೇಲೆ ಅವರು ಕಾಂಗ್ರೆಸ್‌ ಬಿಡಬೇಕು! ಇದು ಅವರ ದ್ವಂದ್ವ ಎಂದು ಹೇಳಿದ್ದಾರೆ.


ಇದನ್ನೂ ಓದಿ:  ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ಮುಖಭಂಗ; ಜಿ.ಟಿ.ದೇವೇಗೌಡಗೆ ಗೆಲುವು


ನನ್ನನ್ನು ಸೋಲಿಸಿದವರು, ಆತ್ಮವಿಮರ್ಶೆ ಮಾಡಿಕೊಂಡು ತಾವೇ ಪಕ್ಷಬಿಟ್ಟು ಹೋಗಬೇಕು ಎಂದು ಹೇಳಿದ್ದೀರಿ. 2009-10ರ ಉಪಚುನಾವಣೆ, 2013ರ ಚುನಾವಣೆಗಳಲ್ಲಿ ಒಳ ಒಪ್ಪಂದ ಮಾಡಿಕೊಂಡ ನಿಮ್ಮ ಆತ್ಮವಿಮರ್ಶೆ ಯಾವಾಗ? ಕಾಂಗ್ರೆಸ್‌ ಬಿಡುವುದು ಯಾವಾಗ? ಈಗಾಗಲೇ ಒಂದು ಬಾರಿ ತಾಯಿಯಂಥ ಪಕ್ಷಕ್ಕೆ ದ್ರೋಹ ಮಾಡಿದ ನಿಮ್ಮ ಉತ್ತರ ಕೇಳಲು ಕಾತರನಾಗಿದ್ದೇನೆ ಎಂದಿದ್ದಾರೆ.


2018ರಲ್ಲಿ ಮೈತ್ರಿಯಾಗಿದ್ದು ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದ್ದು ಹೈಕಮಾಂಡ್‌ನ ನಿರ್ಧಾರವಾಗಿತ್ತು ಎಂದು ಸಿದ್ದರಾಮಯ್ಯ ಹಲವು ಬಾರಿ ಹೇಳಿದ್ದಾರೆ. ಆದರೆ, ಚಾಮುಂಡೇಶ್ವರಿ ಭಾಷಣದ ವೇಳೆ, ನಾನು ಒಪ್ಪದೇ ಹೋಗಿದ್ದಿದ್ದರೆ ಕುಮಾರಸ್ವಾಮಿ ಅವರನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂದಿದ್ದಾರೆ. ಇಲ್ಲಿ ದ್ವಂದ್ವ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.


ಮೈತ್ರಿ ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಸಿದ್ದವನದಲ್ಲಿ ಕುಳಿತು ಸರ್ಕಾರ ಬೀಳಿಸುವ ಚರ್ಚೆ ನಡೆಸಿದವರು ಸಿದ್ದರಾಮಯ್ಯ ಅಲ್ಲವೇ? ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿದ ಶಾಸಕರಲ್ಲಿ ಬಹುತೇಕರು ಅವರ ಬೆಂಬಲಿಗರಾಗಿರಲಿಲ್ಲವೇ? ಆದರೂ, ಸರ್ಕಾರ ಬೀಳಿಸಿದ್ದರ ಅಪವಾದದಿಂದ ಪಾರಾಗಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಇದು ಅವರ ಕಪಟ ನೀತಿ ಎಂದಿದ್ದಾರೆ.


ಕುಮಾರಸ್ವಾಮಿ ಸಿಎಂ ಆಗಿ ಕಚೇರಿಗೇ ಬರುತ್ತಿರಲಿಲ್ಲವಂತೆ, ತಾಜ್‌ವೆಸ್ಟ್‌ಎಂಡ್‌ನಲ್ಲಿ ಇರುತ್ತಿದ್ದರಂತೆ. ಅಹೋರಾತ್ರಿ ಜನತಾ ದರ್ಶನ (Janata Darshana) ತಾಜ್‌ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿತ್ತೋ? ಸಿಎಂ ಕಚೇರಿಯಲ್ಲಿ ನಡೆಯುತ್ತಿತ್ತೋ ಸಿದ್ದರಾಮಯ್ಯನವರೇ? ಬಾದಾಮಿಯಲ್ಲಿ ಈಗ ನಡೆಯುತ್ತಿರುವ 1200 ಕೋಟಿ ಕಾಮಗಾರಿಗಳು ತಾಜ್‌ವೆಸ್ಟ್‌ಎಂಡ್‌ನದ್ದ? ಎಂದು ಪ್ರಶ್ನಿಸಿದ್ದಾರೆ.


'ಎಚ್‌ಡಿಕೆಯವರನ್ನ ಸಿಎಂ ಮಾಡಿದ್ದು ಸಿದ್ದು ಅಲ್ಲ'


ಸಿಎಂ ಸ್ಥಾನದಿಂದ ಇಳಿದ ನಂತರ ಸಿದ್ದರಾಮಯ್ಯ ಸರ್ಕಾರಿ ನಿವಾಸ ತೊರೆಯಲಿಲ್ಲ. ಆ ವಿಚಾರದಲ್ಲಿ ಕಿಂಚಿತ್ತೂ ನಾಚಿಕೆ ಪ್ರದರ್ಶಿಸಲಿಲ್ಲ. ತಾವು ಸಿಎಂ ಆಗಿದ್ದಾಗ 6 ಗಂಟೆಗೆ ಹೇಳದೇ ಕೇಳದೇ ಕಚೇರಿ ತೊರೆದು ಅಜ್ಞಾತರಾಗುತ್ತಿದ್ದ ಸಿದ್ದರಾಮಯ್ಯ, ರಾತ್ರಿ 12 ಗಂಟೆ ವರೆಗೆ ಕಚೇರಿಯಲ್ಲಿ ದುಡಿಯುತ್ತಿದ್ದ ನನ್ನ ಬಗ್ಗೆ ಮಾತನಾಡುವ ನೈತಿಕತೆ ಉಳ್ಳವರೇ? ಎಂದು ಪ್ರಶ್ನಿಸಿದ್ದಾರೆ.


37 ಸ್ಥಾನ ಗೆದ್ದಿದ್ದ ಜೆಡಿಎಸ್‌ಗೆ ನಾವು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟೆವು ಎಂದು ಸಿದ್ದರಾಮಯ್ಯ ಪದೇ ಪದೆ ಹೇಳುತ್ತಾರೆ. ಅದು 37 ಸ್ಥಾನವಾಗಲಿ, ಅಥವಾ 100 ಸ್ಥಾನಗಳಾದರೂ ಆಗಿರಲಿ.  ಅದು ಜನಾದೇಶ. ಆ ವಿಚಾರದಲ್ಲಿ ಮೂದಲಿಕೆ ಮಾಡುವ ಸಿದ್ದರಾಮಯ್ಯ ಅವರಿಗೆ ಜನರ ಆಶಯ, ಅಭಿಪ್ರಾಯಗಳನ್ನು ಒಪ್ಪುವಂಥ ಮನಸ್ಥಿತಿಯೇ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.



ಜೆಡಿಎಸ್‌ ಸ್ಥಾನ ಗಳಿಕೆ, ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯರಿಗೆ ಒಂದು ಸವಾಲು. ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ. ನಂತರ ಜೆಡಿಎಸ್‌ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ ಎಂದು ಹೇಳಿದ್ದಾರೆ.


ಸಿದ್ದರಾಮಯ್ಯನವರೇ ಎಂದೂ ರಾಜಕೀಯ ಒಳಒಪ್ಪಂದದ ಬಗ್ಗೆ ಮಾತಾಡಬೇಡಿ. ತಾವು ರಾಜಕೀಯ ಒಳಒಪ್ಪಂದಗಳ ಜನಕ. ಅದು ಯಾವಾಗಲೂ ಸಾಬೀತಾಗಿದೆ. ಇನ್ನೆಂದು ಜೆಡಿಎಸ್‌ನ ಸ್ಥಾನ ಗಳಿಕೆ ಬಗ್ಗೆ ಲಘುವಾಗಿ ಮಾತಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮಗೆ ಅದು ಸಾಧ್ಯವೂ ಇಲ್ಲ ಎಂದಿದ್ದಾರೆ.