Russia Ukraine War: ಯುದ್ಧವು ನವೀನ್ ಕನಸನ್ನು ನುಚ್ಚುನೂರು ಮಾಡಿದೆ- ಎಚ್​ಡಿಕೆ

ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಇಂದು ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ ಅಂತಾ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Written by - Zee Kannada News Desk | Last Updated : Mar 1, 2022, 06:20 PM IST
  • ಹಾವೇರಿ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿಯಾಗಿರುವುದು ತೀವ್ರ ಆಘಾತವನ್ನುಂಟು ಮಾಡಿದೆ
  • ಭಾರತದಲ್ಲಿ ದುಬಾರಿ ವೈದ್ಯ ಶಿಕ್ಷಣ ಕೈಗೆಟುಕದೇ ನವೀನ್ ಉಕ್ರೇನ್ʼಗೆ ತೆರಳಿದ್ದರು
  • ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧವು ನವೀನ್ ಕನಸನ್ನು ನುಚ್ಚುನೂರು ಮಾಡಿದೆ
Russia Ukraine War: ಯುದ್ಧವು ನವೀನ್ ಕನಸನ್ನು ನುಚ್ಚುನೂರು ಮಾಡಿದೆ- ಎಚ್​ಡಿಕೆ title=
ಯುದ್ಧಕ್ಕೆ ಬಲಿಯಾದ ಕರ್ನಾಟಕದ ವಿದ್ಯಾರ್ಥಿ

ಬೆಂಗಳೂರು: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧವು ಕರ್ನಾಟದ ಪ್ರತಿಭಾವಂತ ವಿದ್ಯಾರ್ಥಿ ನವೀನ್ ಕನಸನ್ನು ನುಚ್ಚುನೂರು ಮಾಡಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy)ಹೇಳಿದ್ದಾರೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

‘ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಇಂದು ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್(Naveen Shekarappa Gyanagoudar)ಬಲಿ ಆಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಯುದ್ಧದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿದ್ದ ಆ ವಿದ್ಯಾರ್ಥಿ ಶೆಲ್ ದಾಳಿಯಲ್ಲಿ ಅಸುನೀಗಿದ್ದಾರೆಂಬ ಸುದ್ದಿ ಶಿವರಾತ್ರಿ ದಿನ ಬರಸಿಡಿಲಿನಂತೆ ಅಪ್ಪಳಿಸಿದೆ’ ಅಂತಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Russia-Ukraine War: ಭಾರತೀಯ ವಿದ್ಯಾರ್ಥಿಯ ಸಾವು ಹಿನ್ನೆಲೆ, ಸಮನ್ಸ್ ಜಾರಿಗೊಳಿಸಿದ ಭಾರತ ಸರ್ಕಾರ

‘ವೈದ್ಯನಾಗಬೇಕು ಎಂಬ ಕನಸು ಹೊತ್ತು ನವೀನ್ ಅಲ್ಲಿಗೆ ಹೋಗಿದ್ದರು. ಭಾರತದಲ್ಲಿ ದುಬಾರಿ ವೈದ್ಯ ಶಿಕ್ಷಣ ಕೈಗೆಟುಕದೇ ಅವರು ಉಕ್ರೇನ್ʼಗೆ ತೆರಳಿದ್ದರು. ಯುದ್ಧವು(Russia Ukraine War) ಅವರ ಕನಸನ್ನು ನುಚ್ಚುನೂರು ಮಾಡಿದೆ. ಇಂತಹ ಅನೇಕ ವಿದ್ಯಾರ್ಥಿಗಳು ಇನ್ನೂ ಖಾರ್ಕೀವ್ ನಗರದಲ್ಲೇ ಸಿಲುಕೊಂಡಿದ್ದಾರೆ. ಶೆಲ್‌ ದಾಳಿಗೆ ತುತ್ತಾಗುವ ಮುನ್ನ 2 ಸಲ ತಮ್ಮ ಪೋಷಕರಿಗೆ ನವೀನ್‌(Naveen Gyanagoudar) ಕರೆ ಮಾಡಿದ್ದರು, ಅದಾದ ಸ್ವಲ್ಪ ಹೊತ್ತಿನಲ್ಲೇ ಅಸುನೀಗಿದ್ದಾರೆ ಎಂಬುದನ್ನು ನೆನೆದರೆ ಬಹಳ ನೋವಾಗುತ್ತದೆ. ಬಾಂಬ್‌, ಕ್ಷಿಪಣಿ, ಶೆಲ್‌ ಸ್ಫೋಟಗಳಿಂದ ಅವರೆಲ್ಲರೂ ಖಾರ್ಕೀವ್‌ ನಗರದಲ್ಲಿ ತತ್ತರಿಸುತ್ತಿದ್ದಾರೆ. ಮೊದಲೇ ಇಲ್ಲಿ ಸಿಲುಕಿರುವವರನ್ನು ರಕ್ಷಿಸಬೇಕಿತ್ತು’ ಅಂತಾ ಎಚ್ ಡಿಕೆ ಹೇಳಿದ್ದಾರೆ.

‘ಆ ವಿದ್ಯಾರ್ಥಿಳೆಲ್ಲರೂ 6 ದಿನಗಳಿಂದ ಬಂಕರ್‌ʼನಲ್ಲೇ(Russia Ukraine Crisis) ಇದ್ದಾರೆ. ಅವರೀಗ ಕೇವಲ ಚಾಕೋಲೇಟ್‌, ಬಿಸ್ಕೆಟ್‌, ಸ್ನೀಕರ್‌ʼಗಳನ್ನು ತಿನ್ನುತ್ತಾ ಬದುಕುಳಿದಿದ್ದಾರೆ. ನೀರು-ಆಹಾರಕ್ಕೆ ತತ್ವಾರವಾಗಿದೆ ಎಂದು ಅಲ್ಲಿನ ಕನ್ನಡ ವಿದ್ಯಾರ್ಥಿಗಳು ಮಾಧ್ಯಮಗಳ ಮೂಲಕ ಅಳಲು ತೋಡಿಕೊಳ್ಳುತ್ತಿದ್ದಾರೆ ಕೇಂದ್ರ ಸರ್ಕಾರ ಅಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ರಕ್ಷಿಸುವ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಬೇಕು’ ಅಂತಾ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಇದ್ದೊಬ್ಬ ಮಗನನ್ನು ಕಳೆದುಕೊಂಡ ಕುಟುಂಬ.. ನವೀನ್ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ ಪಿಎಂ ಮೋದಿ

‘ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವೂ ಮತ್ತಷ್ಟು ಕ್ಷಿಪ್ರವಾಗಿ ಕೆಲಸ ಮಾಡಬೇಕು. ಇನ್ನೊಂದು ಜೀವ ಹೋಗಲೂ ಬಿಡಬಾರದು. ಉಕ್ರೇನ್‌(Ukraine) ಭಾರತೀಯ ರಾಯಭಾರ ಕಚೇರಿ ಸೂಕ್ತವಾಗಿ ಸ್ಪಂದಿಸುತ್ತಿವಲ್ಲವೆಂಬ ಆರೋಪವೂ ಕೇಳಿಬರುತ್ತಿದೆ. ವಿದ್ಯಾರ್ಥಿ ನವೀನ್‌ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಮಗನನ್ನು ಕಳೆದುಕೊಂಡು ಅತೀವ ದುಃಖದಲ್ಲಿರುವ ಅವರ ಪೋಷಕರಿಗೆ ನನ್ನ ಸಂತಾಪಗಳು. ನವೀನ್‌ ಅವರ ಪಾರ್ಥೀವ ಶರೀರವನ್ನು ಆದಷ್ಟು ಬೇಗ ಅವರ ಕುಟುಂಬಕ್ಕೆ ತಲುಪಿಸುವ ಕೆಲಸ ಸರ್ಕಾರದಿಂದ ಆಗಬೇಕು’ ಅಂತಾ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News