ಬೆಂಗಳೂರು: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧವು ಕರ್ನಾಟದ ಪ್ರತಿಭಾವಂತ ವಿದ್ಯಾರ್ಥಿ ನವೀನ್ ಕನಸನ್ನು ನುಚ್ಚುನೂರು ಮಾಡಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy)ಹೇಳಿದ್ದಾರೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

‘ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಇಂದು ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್(Naveen Shekarappa Gyanagoudar)ಬಲಿ ಆಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಯುದ್ಧದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿದ್ದ ಆ ವಿದ್ಯಾರ್ಥಿ ಶೆಲ್ ದಾಳಿಯಲ್ಲಿ ಅಸುನೀಗಿದ್ದಾರೆಂಬ ಸುದ್ದಿ ಶಿವರಾತ್ರಿ ದಿನ ಬರಸಿಡಿಲಿನಂತೆ ಅಪ್ಪಳಿಸಿದೆ’ ಅಂತಾ ಟ್ವೀಟ್ ಮಾಡಿದ್ದಾರೆ.


Russia-Ukraine War: ಭಾರತೀಯ ವಿದ್ಯಾರ್ಥಿಯ ಸಾವು ಹಿನ್ನೆಲೆ, ಸಮನ್ಸ್ ಜಾರಿಗೊಳಿಸಿದ ಭಾರತ ಸರ್ಕಾರ


‘ವೈದ್ಯನಾಗಬೇಕು ಎಂಬ ಕನಸು ಹೊತ್ತು ನವೀನ್ ಅಲ್ಲಿಗೆ ಹೋಗಿದ್ದರು. ಭಾರತದಲ್ಲಿ ದುಬಾರಿ ವೈದ್ಯ ಶಿಕ್ಷಣ ಕೈಗೆಟುಕದೇ ಅವರು ಉಕ್ರೇನ್ʼಗೆ ತೆರಳಿದ್ದರು. ಯುದ್ಧವು(Russia Ukraine War) ಅವರ ಕನಸನ್ನು ನುಚ್ಚುನೂರು ಮಾಡಿದೆ. ಇಂತಹ ಅನೇಕ ವಿದ್ಯಾರ್ಥಿಗಳು ಇನ್ನೂ ಖಾರ್ಕೀವ್ ನಗರದಲ್ಲೇ ಸಿಲುಕೊಂಡಿದ್ದಾರೆ. ಶೆಲ್‌ ದಾಳಿಗೆ ತುತ್ತಾಗುವ ಮುನ್ನ 2 ಸಲ ತಮ್ಮ ಪೋಷಕರಿಗೆ ನವೀನ್‌(Naveen Gyanagoudar) ಕರೆ ಮಾಡಿದ್ದರು, ಅದಾದ ಸ್ವಲ್ಪ ಹೊತ್ತಿನಲ್ಲೇ ಅಸುನೀಗಿದ್ದಾರೆ ಎಂಬುದನ್ನು ನೆನೆದರೆ ಬಹಳ ನೋವಾಗುತ್ತದೆ. ಬಾಂಬ್‌, ಕ್ಷಿಪಣಿ, ಶೆಲ್‌ ಸ್ಫೋಟಗಳಿಂದ ಅವರೆಲ್ಲರೂ ಖಾರ್ಕೀವ್‌ ನಗರದಲ್ಲಿ ತತ್ತರಿಸುತ್ತಿದ್ದಾರೆ. ಮೊದಲೇ ಇಲ್ಲಿ ಸಿಲುಕಿರುವವರನ್ನು ರಕ್ಷಿಸಬೇಕಿತ್ತು’ ಅಂತಾ ಎಚ್ ಡಿಕೆ ಹೇಳಿದ್ದಾರೆ.


Russia Ukraine Crisis) ಇದ್ದಾರೆ. ಅವರೀಗ ಕೇವಲ ಚಾಕೋಲೇಟ್‌, ಬಿಸ್ಕೆಟ್‌, ಸ್ನೀಕರ್‌ʼಗಳನ್ನು ತಿನ್ನುತ್ತಾ ಬದುಕುಳಿದಿದ್ದಾರೆ. ನೀರು-ಆಹಾರಕ್ಕೆ ತತ್ವಾರವಾಗಿದೆ ಎಂದು ಅಲ್ಲಿನ ಕನ್ನಡ ವಿದ್ಯಾರ್ಥಿಗಳು ಮಾಧ್ಯಮಗಳ ಮೂಲಕ ಅಳಲು ತೋಡಿಕೊಳ್ಳುತ್ತಿದ್ದಾರೆ ಕೇಂದ್ರ ಸರ್ಕಾರ ಅಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ರಕ್ಷಿಸುವ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಬೇಕು’ ಅಂತಾ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಇದ್ದೊಬ್ಬ ಮಗನನ್ನು ಕಳೆದುಕೊಂಡ ಕುಟುಂಬ.. ನವೀನ್ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ ಪಿಎಂ ಮೋದಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.