ಪಕ್ಷ ಉಳಿಸಲು ಬಿಜೆಪಿ ಜತೆ ಹೊಂದಾಣಿಕೆ : ಸುಳಿವು ನೀಡಿದ ಹೆಚ್‌ಡಿಕೆ

ಬಿಜೆಪಿ ಜತೆ ಹೊಂದಾಣಿಕೆ ಸಾಧ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿಗೆ ಟಾಂಗ್ ನೀಡಿದ್ದರು. ಈ ವೇಳೆ ಮಾತನಾಡಿದ ಹೆಚ್‌. ಡಿ. ಕುಮಾರಸ್ವಾಮಿ, ಹೊಂದಾಣಿಕೆ ಮಾಡಿಕೊಳ್ಳುವುದಾದರೆ ಮಾಡೋದಾದರೆ ನೇರವಾಗಿ ಮಾಡ್ತೇವೆ ಎಂದರು.

Written by - RACHAPPA SUTTUR | Edited by - Krishna N K | Last Updated : Jul 13, 2023, 08:51 PM IST
  • ಬಿಜೆಪಿ ಜತೆ ಹೊಂದಾಣಿಕೆ ಸಾಧ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಹೆಚ್‌.ಡಿ.ಕೆ ಟಾಂಗ್‌ ನೀಡಿದ್ದರು.
  • ಹೊಂದಾಣಿಕೆ ಮಾಡಿಕೊಳ್ಳುವುದಾದರೆ ಮಾಡೋದಾದರೆ ನೇರವಾಗಿ ಮಾಡ್ತೇವೆ ಎಂದು ಕುಮಾರಸ್ವಾಮಿಯವರು ಪ್ರತ್ಯುತ್ತರ ನೀಡಿದ್ದಾರೆ.
ಪಕ್ಷ ಉಳಿಸಲು ಬಿಜೆಪಿ ಜತೆ ಹೊಂದಾಣಿಕೆ : ಸುಳಿವು ನೀಡಿದ ಹೆಚ್‌ಡಿಕೆ title=

ಬೆಂಗಳೂರು : ಬಿಜೆಪಿ ಬಿ ಟೀಂ ಎಂದು ಹೇಳಿ ನೀವೇ ನಮ್ಮನ್ನು ಬಿಜೆಪಿ ಕಡೆ ತಳ್ಳುತ್ತೀರಿ.ನಾವೂ ರಾಜಕೀಯದಲ್ಲಿ ಉಳಿಯಬೇಕಲ್ವಾ? ಎಂದು ಹೇಳುವ ಮೂಲಕ ಬಿಜೆಪಿ ಜತೆ ಸ್ಥಾನ ಹೊಂದಾಣಿಕೆ ಸುಳಿವನ್ನು ಮಾಜಿ ಸಿಎಂ ಎಚ್ ಡಿಕೆ ಬಿಟ್ಟು ಕೊಟ್ಟಿದ್ದಾರೆ.

ವಿಧಾನ ಸಭೆಯಲ್ಲಿಂದು ವಂದನಾ ನಿರ್ಣಯದ ಮೇಲೆ ಸಿಎಂ ಉತ್ರರ ನೀಡುತ್ತಿದ್ದ ವೇಳೆ ಬಿಜೆಪಿ ಪರವಾಗಿ ಮಾತಾನಾಡುತ್ತಿದ್ದೀರಿ. ಬಿಜೆಪಿ ಜತೆ ಹೊಂದಾಣಿಕೆ ಸಾಧ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂಗೆ ಟಾಂಗ್ ಕೊಟ್ಟರು. ಈ ವೇಳೆ ಮಾತನಾಡಿದ ಹೆಚ್‌. ಡಿ. ಕುಮಾರಸ್ವಾಮಿ, ಹೊಂದಾಣಿಕೆ ಮಾಡಿಕೊಳ್ಳುವುದಾದರೆ ಮಾಡೋದಾದರೆ ನೇರವಾಗಿ ಮಾಡ್ತೇವೆ ಎಂದರು.

ಇದನ್ನೂ ಓದಿ: ಸಿಎಂ ಆಗಿದ್ದಾಗ ಹೆಚ್ಡಿಕೆ ಅಧಿಕಾರಿಯನ್ನು ಏಳು ಬಾರಿ ವರ್ಗಾವಣೆ ಮಾಡಿದ್ರು : ಸಚಿವ ಚೆಲುವರಾಯಸ್ವಾಮಿ ಆರೋಪ

ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆದು ಒಂದು ವರೆ ಗಂಟೆಗಳ ಕಾಲ ಚರ್ಚಿಸಿದ್ದರು. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರಲ್ಲ, ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ‌‌ ನೀಡಿದ್ದರು. ಅವರ ಮಾತು ಕೇಳಿದ್ದರೆ ಕಳೆದ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಸಿಎಂ ಆಗಿರುತ್ತಿದ್ದರ ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಸಿಎಂ‌ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಆಪರೇಷನ್ ಕಮಲದ ಪ್ರಸ್ತಾಪ ಬಂದಾಗ ಮಧ್ಯಪ್ರವೇಶ ಮಾಡಿ ಮಾತನಾಡಿದ ಹೆಚ್‌.ಡಿ.ಕೆ ಆಪರೇಷನ್ ಕಮಲ ಎಂಬುದು ಇತ್ತು‌. ಆದರೆ ಮಾಧ್ಯಮಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಆಪರೇಷನ್ ಹಸ್ತ ಎಂಬ ಸುದ್ದಿ ಬರುತ್ತಿವೆ ಎಂದರು.

ಇದನ್ನೂ ಓದಿ: ಜಾಮೀನು ಕೋರಿ ಮನೀಶ್ ಸಿಸೋಡಿಯಾ ಸುಪ್ರೀಂಗೆ ಸಲ್ಲಿಸಿರುವ ಮೇಲ್ಮನವಿ ನಾಳೆ ವಿಚಾರಣೆ

ಈ‌ ವೇಳೆ ಕುಮಾರಸ್ವಾಮಿ ಅವರೆ ಏಕೆ ಅವರ ಜೊತೆ ಸೇರಿಕೊಂಡಿದ್ದೀರಾ? ಎಂದು ಸಿದ್ದರಾಮಯ್ಯ ತಿರುಗೇಟು ‌ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಲೋಕಸಭಾ ಚುನಾವಣೆಗಿಂತ 15 ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಕರೆದು ಒಂದುವರೆ ಗಂಟೆ ಚರ್ಚೆ ಮಾಡಿದ್ದರು‌. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರಲ್ಲ, ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ ಕೊಟ್ಟಿದ್ದರು. ಆದರೆ ನಾನು ಅದನ್ನು ತಿರಸ್ಕಾರ ಮಾಡಿದೆ‌. ಕಪ್ಪು ಚುಕ್ಕೆ ಬರಬಾರದು ಎಂಬ ಕಾರಣಕ್ಕಾಗಿ ಮುಂದುವರಿದೆ‌ ಎಂದರು. ಪ್ರಧಾನಿ ಮಾತು ಕೇಳಿ ತೀರ್ಮಾನ ಮಾಡಿದರೆ ನಾನು ಕಳೆದ ಐದು ವರ್ಷಗಳ ಕಾಲ ಸಿಎಂ ಆಗ್ತಿದ್ದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News