ನೀರಿನ ಸಮಸ್ಯೆ ಬಗೆಹರಿಸುವ ಬದಲು ಕುಮಾರಸ್ವಾಮಿ ನಾಟಕವಾಡುತ್ತಿದ್ದಾರೆ- ಯಡಿಯೂರಪ್ಪ

 ರಾಜ್ಯದಲ್ಲಿ ನೀರಿನ ಬಿಕ್ಕಟ್ಟಿನ ಸಮಸ್ಯೆ ಇದೆ ಆದರ ಬಗ್ಗೆ ಯಾವುದೇ ಕ್ರಮಗೊಳ್ಳದೆ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಆರೋಪಿಸಿದ್ದಾರೆ.

Last Updated : Jun 7, 2019, 03:44 PM IST
ನೀರಿನ ಸಮಸ್ಯೆ ಬಗೆಹರಿಸುವ ಬದಲು ಕುಮಾರಸ್ವಾಮಿ ನಾಟಕವಾಡುತ್ತಿದ್ದಾರೆ- ಯಡಿಯೂರಪ್ಪ  title=

ಬೆಂಗಳೂರು:  ರಾಜ್ಯದಲ್ಲಿ ನೀರಿನ ಬಿಕ್ಕಟ್ಟಿನ ಸಮಸ್ಯೆ ಇದೆ ಆದರ ಬಗ್ಗೆ ಯಾವುದೇ ಕ್ರಮಗೊಳ್ಳದೆ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಆರೋಪಿಸಿದ್ದಾರೆ.

"ರಾಜ್ಯದಲ್ಲಿ ಬರಗಾಲ ಇದ್ದಾಗ, ಹಳ್ಳಿಗಳಲ್ಲಿನ ನೀರಿನ ಬಿಕ್ಕಟ್ಟನ್ನು ಪರಿಹರಿಸುವ ಬದಲು, ಅವರು (ಸಿಎಂ ಎಚ್ಡಿ ಕುಮಾರಸ್ವಾಮಿ) ಎಲ್ಲ ಗ್ರಾಮಗಳ ಶಾಲೆಗಳಿಗೆ ಹೋಗುವುದರ ಮೂಲಕ ರಾಜಕೀಯ ನಾಟಕವಾಡುತ್ತಿದ್ದಾರೆ.ಇಂತಹ ಕೆಲಸ ನಡೆಯುವುದಿಲ್ಲ" ಎಂದು ಯಡಿಯೂರಪ್ಪ ಹೇಳಿದರು. 

ರಾಜ್ಯದಲ್ಲಿ ಮಾನ್ಸೂನ್ ಆಗಮನದಲ್ಲಿ ವಿಳಂಬವಾಗಿರುವ ಹಿನ್ನಲೆಯಲ್ಲಿ ಈ ಯಡಿಯೂರಪ್ಪ ಅವರ ಹೇಳಿಕೆ ಬಂದಿದೆ. ರಾಜ್ಯದಲ್ಲಿ ಮಾನ್ಸೂನ್ ಮಳೆ ಇಲ್ಲದ ಕಾರಣ ತೀವ್ರ ನೀರಿನ ಕೊರತೆಯನ್ನು ಎದುರಿಸುತ್ತಿವೆ. ಈಗ ಗ್ರಾಮದ ಶಾಲೆಗಳಲ್ಲಿ ವಾಸ್ತವ್ಯ ಹೂಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಿರುವ ಹಿನ್ನಲೆಯಲ್ಲಿ ಯಡಿಯೂರಪ್ಪ ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.

Trending News