ಬೆಂಗಳೂರು: ಪ್ರಹ್ಲಾದ್ ಜೋಷಿ ಅವರನ್ನು ಉಲ್ಲೇಖಿಸುತ್ತಾ ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಕುರಿತ ಹೇಳಿಕೆ ತಾವು ಬದ್ದ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅಧಿಕಾರದಿಂದ ಕಿತ್ತು ಕೆಳಗಿಳಿಸಿದರೂ ಕಾಂಗ್ರೆಸ್ ನಾಯಕರ ಮದ ಇಳಿಯುತ್ತಿಲ್ಲ: ಬಿಜೆಪಿ ಟೀಕೆ


ಆ ಮೂಲಕ ಕುಮಾರಸ್ವಾಮಿ ಈಗ ಹೊಸ ರಾಜಕೀಯ ತಂತ್ರಕ್ಕೆ ಮುಂದಾಗಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.ಕುಮಾರಸ್ವಾಮಿ ಈ ಹೇಳಿಕೆ ನೀಡುತ್ತಿದ್ದಂತೆ ಅವರ ಮೇಲೆ ಬಿಜೆಪಿಗರು ಮುಗಿಬಿದ್ದಿರುವ ಬೆನ್ನಲ್ಲೇ ಕುಮಾರಸ್ವಾಮಿ ಅವರ ಈ ಸಮರ್ಥನೆ ಬಂದಿದೆ.


ಇದನ್ನೂ ಓದಿ : ಟಿ 20 ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಈ ಸ್ಟಾರ್ ಆಟಗಾರ..! 


ರಾಜಕೀಯ ವಲಯದಲ್ಲಿ ಕುಮಾರಸ್ವಾಮಿ ಈಗ ಪರೋಕ್ಷವಾಗಿ ಲಿಂಗಾಯತ ದಾಳವನ್ನು ಉರುಳಿಸಿ ಬಿಜೆಪಿಯಿಂದ ಲಿಂಗಾಯತ ಸಮುದಾಯವನ್ನು ದೂರ ಮಾಡುವ ಲೆಕ್ಕಾಚಾರದಲ್ಲಿದ್ದಾರೆ ಎನ್ನಲಾಗಿದೆ.


ಈಗ ಕುಮಾರಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಲೇ ಯಡಿಯೂರಪ್ಪ,ಜಗದೀಶ್ ಶೆಟ್ಟರ್‌ರನ್ನು ಬಿಜೆಪಿ ಮೂಲೆಗುಂಪು ಮಾಡಿದೆ.ಆ ಮೂಲಕ ಅದು ಪಕ್ಷದ ಅಗ್ರಗಣ್ಯನಾಯಕರನ್ನು ಕಡೆಗಣಿಸುತ್ತಿದೆ ಎಂದು ಅವರು ದೂರಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.