ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಬಾಂಬ್ ಬೆದರಿಕೆ ಹಾಕಿರುವ ಪ್ರಕರಣವು ಭಾರೀ ಆತಂಕವನ್ನುಂಟು ಮಾಡಿದೆ. ಈಗಾಗಲೇ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಬೆಂಗಳೂರಿನ ವಿವಿಧ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಲಾಗಿದ್ದು ಪೋಷಕರಲ್ಲಿ ಆತಂಕ ಮೂಡಿದೆ.


COMMERCIAL BREAK
SCROLL TO CONTINUE READING

ಇನ್ನು ಬೆಂಗಳೂರಿನ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ’ ಎಂದು ಹೇಳಿದ್ದಾರೆ. ‘ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು’ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: "ಎರಡು ದಿನಗಳಲ್ಲಿ ವರದಿ ತಗೊಂಡು ಕ್ರಮ ತೆಗೆದುಕೊಳ್ಳುತ್ತೇವೆ"


ರಾಜ್ಯ ಸರ್ಕಾರ ಮೀನಾಮೇಷ ಎಣಿಸಬಾರದು’ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: "ಪಂಚರಾಜ್ಯಗಳ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ"


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.