ಬೆಂಗಳೂರು: ಬಿಜೆಪಿ ಸರ್ಕಾರವು ಕರ್ನಾಟಕ ಪೊಲೀಸ್ ವ್ಯವಸ್ಥೆಯ ನೈತಿಕ ಸ್ಥೈರ್ಯ ಕುಗ್ಗಿಸಿದೆ ಎಂದು ಮಾಜಿ ಸಿಎಂ ಎಚ್‍.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಸಾವು ಪ್ರಕರಣ ಸಂಬಂಧ  #CashForPosting ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

‘ಅಮಾನತು ಶಿಕ್ಷೆಗೆ ಗುರಿಯಾಗಿ ಧಾರುಣ ಸಾವಿಗೆ ತುತ್ತಾದ ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಹೃದಯಾಘಾತಕ್ಕೆ ಕಾರಣವೇನು? ಇದು, ಇಡೀ ರಾಜ್ಯದ ಪ್ರಶ್ನೆ. ಈಗ ಸರ್ಕಾರ ಸತ್ಯ ಹೇಳಿದೆ! ಸದ್ಯ, ಸರ್ಕಾರವೂ ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ!! ಸಿಎಂ ಬಸವರಾಜ ಬೊಮ್ಮಾಯಿಯವರ ಸಂಪುಟ ಸಚಿವರೇ ವಿಷಯ ಬಹಿರಂಗ ಮಾಡಿದ್ದಾರೆ. ಅಲ್ಲಿಗೆ, ರಾಜ್ಯದಲ್ಲಿ ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ ಎನುವುದನ್ನು ಸ್ವತಃ ಸರ್ಕಾರವೇ ಒಪ್ಪಿಕೊಂಡಂತೆ ಆಗಿದೆ’ ಎಂದು ಟೀಕಿಸಿದ್ದಾರೆ.


ದಕ್ಷಿಣ ಭಾರತದ ಮೊದಲ ವಂದೇ ಭಾರತ ಎಕ್ಸ್ ಪ್ರೆಸ್ ಗೆ ಚಾಲನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ನಮ್ಮಲ್ಲಿ ಚರಿತ್ರೆ ಇದೆ, ಚಾರಿತ್ರ್ಯ ಬೇಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


‘ಬಿಜೆಪಿ ಸರ್ಕಾರವು ಕರ್ನಾಟಕ ಪೊಲೀಸ್ ವ್ಯವಸ್ಥೆಯ ನೈತಿಕಸ್ಥೈರ್ಯ ಕುಗ್ಗಿಸಿದೆ. ಬಿಜೆಪಿ ಹೈಕಮಾಂಡ್ ಏಜೆಂಟ್‍ರಂತೆ ವರ್ತಿಸುತ್ತಿರುವ ಉತ್ತರ ಭಾರತದ ಕೆಲ ಹಿರಿಯ ಹಿಂದಿ ಪೊಲೀಸ್ ಅಧಿಕಾರಿಗಳು, ಕನ್ನಡ ಅಧಿಕಾರಿಗಳನ್ನು ಗುಲಾಮರಂತೆ ನೋಡುತ್ತಿದ್ದಾರೆ. ನಮ್ಮ ಕಿರಿಯ ಮಟ್ಟದ ಅಧಿಕಾರಿಗಳು ಅವರಿಗೆ ಊಳಿಗ ಮಾಡುವಂಥ ಸ್ಥಿತಿ ಇದೆ. ಅಲ್ಲದೆ, ಸಾವಿನ ಮನೆಗೆ ಸಾಂತ್ವನ ಹೇಳಲು ಹೋದ ಸಚಿವರೇ ಸತ್ತ ಜೀವದ ಬಗ್ಗೆ ಎಗ್ಗಿಲ್ಲದೇ ನಿರ್ಲಜ್ಜವಾಗಿ ಮಾತನಾಡಿದ್ದು ಸರಿಯೋ ತಪ್ಪೋ.., ಆ ತರ್ಕ ಬೇಡ. ಆದರೆ, ರಾಜ್ಯದ ಜನತೆಗೆ ಸತ್ಯ ಗೊತ್ತಾಗಬೇಕಿದೆ. ಸಂಘ ಸಂಸ್ಕಾರದ ಸರ್ಕಾರಕ್ಕೆ ಸತ್ಯ ಹೇಳದೇ ದಾರಿ ಇಲ್ಲ’ವೆಂದು ಕುಮಾರಸ್ವಾಮಿ ಕುಟುಕಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ