)
ಮಂಡ್ಯ: ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.
ಮಳವಳ್ಳಿ ತಾಲೂಕಿನ ಹಂಡನಹಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಿ ವಿನಾಯಕ ದೇವರು ಹಾಗೂ ನಾಗದೇವತೆಗಳ ನೂತನ ಶಿಲಾ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಂಡ್ಯ ಜನರು ನನ್ನನ್ನು ಲೋಕಸಭೆ ಸದಸ್ಯನಾಗಿ ಗೆಲ್ಲಿಸಿದ್ದಾರೆ. ಅವರ ಆಶೀರ್ವಾದ, ವಿಶ್ವಾಸಕ್ಕೆ ನಾನು ಋಣಿ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಗಳನ್ನು ನೀಡಿದ್ದಾರೆ. ಹೇಗಾದರೂ ಪ್ರಯತ್ನಪಟ್ಟು ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳ ಯಾವುದೇ ಭಾಗಕ್ಕೆ ಒಂದೆರೆಡು ಕೈಗಾರಿಕೆ ತರಬೇಕು ಎಂದು ಶ್ರಮ ಹಾಕುತ್ತಿದ್ದೇನೆ. ಆದರೆ, ರಾಜ್ಯ ಸರ್ಕಾರ ನನಗೆ ಬೆಂಬಲ ಕೊಡುತ್ತಿಲ್ಲ ಎಂದು ನೇರ ಆರೋಪ ಮಾಡಿದರು.
ಇದನ್ನೂ ಓದಿ : ಸುದ್ದಿಗೋಷ್ಠಿಯಲ್ಲಿ ಯತ್ನಾಳ್ ಸ್ಫೋಟಕ ಹೇಳಿಕೆ..!
ಕುದುರೆಮುಖ ಕಾರ್ಖಾನೆ ಪುನಶ್ಚೇತನಕ್ಕೆ ಅಡ್ಡಿ:
ಕುದುರೆಮುಖ ಕಬ್ಬಿಣ ಮತ್ತು ಅದಿರು ಕಾರ್ಖಾನೆ ರಾಜ್ಯದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದು. ಮಂಗಳೂರಿನ ಕಡಲ ದಂಡೆಯಲ್ಲಿ ಅದರ ಪ್ರಮುಖ ಕಾರ್ಖಾನೆ ಇದೆ. ಸಾವಿರಾರು ಸ್ಥಳೀಯರಿಗೆ ಉದ್ಯೋಗ ನೀಡಿದೆ. ಕುದುರೆಮುಖದಲ್ಲಿ ಗಣಿಗಾರಿಕೆ ಸ್ಥಗಿತವಾದ ಮೇಲೆ ಬಳ್ಳಾರಿಯ ಸಂಡೂರಿನ ದೇವದಾರಿಯಲ್ಲಿ 2018ರವರೆಗೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಹಣ ಪಡೆದುಕೊಂಡು ಅನುಮತಿ ನೀಡಿತ್ತು. ಗಣಿ ಹಂಚಿಕೆ ಮಾಡಲು ಕೋಟಿಗಟ್ಟಲೆ ಹಣ ಪಡೆದು ಅನೇಕ ವರ್ಷವಾದರೂ ಗಣಿ ಮಾಡಿಲ್ಲ. ಅಲ್ಲಿ ಗಣಿಗಾರಿಕೆ ಮಾಡದ ಹೊರತು ಕಾರ್ಖಾನೆಗೆ ಅದಿರು ಸಿಗದಂತಾಯಿತು ಎಂದು ಕೇಂದ್ರ ಸಚಿವರು ವಸ್ತುಸ್ಥಿತಿಯನ್ನು ಜನರ ಮುಂದೆ ಬಿಡಿಸಿಟ್ಟರು.
ನಾನು ಕೇಂದ್ರದಲ್ಲಿ ಉಕ್ಕು ಸಚಿವನಾದ ಕೂಡಲೇ ಸಚಿವಾಲಯದ ಅಧಿಕಾರಿಗಳು ಈ ವಿಷಯವನ್ನು ನನ್ನ ಗಮನಕ್ಕೆ ತಂದರು. ರಾಜ್ಯ ಸರ್ಕಾರ ಅಡ್ಡಿ ಮಾಡುತ್ತಿರುವ ಬಗ್ಗೆ ತಿಳಿಸಿದರು. ಅಲ್ಲದೆ, ಕುದುರೆಮುಖ ಕಂಪನಿಗೆ ಬಳ್ಳಾರಿಯಲ್ಲಿ ಗಣಿಗಾರಿಕೆ ಮಾಡಲು ಹಣದ ಅವಶ್ಯಕತೆ ಇತ್ತು. ₹1,700 ಕೋಟಿ ಮೊತ್ತದ ಹಣಕಾಸು ನೆರವು ಕೊಡುವ ಪ್ರಸ್ತಾವನೆ ವಿತ್ತ ಸಚಿವಾಲಯಕ್ಕೆ ಹೋಗುವ ಕಡತಕ್ಕೆ ಸಹಿ ಹಾಕಿದೆ. ಉಕ್ಕು ಸಚಿವನಾಗಿ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಮೊತ್ತ ಮೊದಲ ಸಹಿಯನ್ನು ನಾನು ಹಾಕಿದೆ. ರಾಜಕೀಯವಾಗಿ ನನ್ನ ವಿರುದ್ಧ ಅಸೂಯೆ ಪಡುತ್ತಿರುವ ರಾಜ್ಯ ಸರ್ಕಾರ ಅದಕ್ಕೆ ಅಡ್ಡಿಪಡಿಸಿತು. ಮಂಗಳೂರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಎರಡು ಸಾವಿರ ಉದ್ಯೋಗಿಗಳು ಕೆಲಸ ಕಳೆದುಕೊಂಡರು. ಕೊನೆಗೆ ಇವರ ಹಿತ, ರಾಜ್ಯದ ಹಿತಕ್ಕಾಗಿ ನಾನು ಕುದುರೆಮುಖ ಸಂಸ್ಥೆಯನ್ನು ರಾಷ್ಟ್ರೀಯ ಖನಿಜಾವೃದ್ಧಿ ನಿಗಮ (NMDC) ವಿಲೀನ ಮಾಡುವ ನಿರ್ಧಾರ ಕೈಗೊಂಡೆ. ಅದೇ ರೀತಿ ಹೆಚ್ ಎಂಟಿ ಅಭಿವೃದ್ಧಿ ವಿಷಯದಲ್ಲಿಯೂ ರಾಜ್ಯ ಸರಕಾರ ರಾಜಕೀಯ ಮಾಡುತ್ತ ಅಡ್ಡಗಾಲು ಹಾಕುತ್ತಿದೆ ಎಂದು ಕೇಂದ್ರ ಸಚಿವರು ದೂರಿದರು.
ನೆರೆಯ ಆಂಧ್ರ, ತೆಲಂಗಾಣ ಇನ್ನಿತರೆ ರಾಜ್ಯಗಳ ಸಹಕಾರ ನೆನೆಸಿದ ಕೇಂದ್ರ ಸಚಿವರು; ವೈಜಾಗ್ ಸ್ಟೀಲ್ ಉದಾಹರಣೆ ಕೊಟ್ಟರು. ಚಂದ್ರಬಾಬು ನಾಯ್ಡು ಅವರು ಈ ಕಾರ್ಖಾನೆಯನ್ನು ಪುನಶ್ಚೇತನ ಮಾಡುವ ಉದ್ದೇಶದಿಂದ ಅನೇಕ ಸಲ ನನ್ನನ್ನು ಭೇಟಿಯಾದರು. ಅನೇಕ ಸಭೆಗಳಿಗೆ ಬಂದರು. ಆ ರಾಜ್ಯದ ನಾಯಕರು ಪಕ್ಷಾತೀತವಾಗಿ ನನಗೆ ಬೇಡಿಕೆ ಇಟ್ಟರು. ಅವರ ಬದ್ಧತೆ ನಮ್ಮ ಸರಕಾರಕ್ಕೆ ಏಕಿಲ್ಲ? ನಮ್ಮ ರಾಜ್ಯದ ಅಭಿವೃದ್ಧಿ ಬಗ್ಗೆ ರಾಜಕೀಯ ಬೆರೆಸುವುದು ಎಷ್ಟು ಸರಿ? ಇದರಿಂದ ಯಾರಿಗೆ ನಷ್ಟ? ಯುವ ಜನರಿಗೆ ಉದ್ಯೋಗ ದೊರೆಯುತ್ತಿಲ್ಲ, ಅದಕ್ಕೆ ಹೊಣೆ ಯಾರು? ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಇದನ್ನೂ ಓದಿ : ವಿದ್ಯುತ್ ದೀಪಗಳಿಂದ ಕಂಗೊಳಿಸಲಿದೆ ಶಕ್ತಿ ಕೇಂದ್ರ
ಅಭಿವೃದ್ಧಿಯಲ್ಲಿ ಕೂಡ ರಾಜ್ಯ ಸರಕಾರ ರಾಜಕೀಯ ಮಾಡುತ್ತಿದೆ. ತಮ್ಮ ರಾಜಕೀಯ ವಿರೋಧಿಗಳಿಗೆ ಸಹಕಾರ ನೀಡುವುದು ಇರಲಿ, ಅವರ ಒಳ್ಳೆಯ ಕೆಲಸಗಳನ್ನು ಬೆಂಬಲಿಸುವ ಕೆಲಸವನ್ನು ಮಾಡುತ್ತಿಲ್ಲ. ಹೀಗಾದರೆ ರಾಜ್ಯಕ್ಕೆ ಕೈಗಾರಿಕೆಗಳು ಎಲ್ಲಿಂದ ಬರುತ್ತವೆ ಎಂದು ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.
ಹಿಂದಿನ ದಿನಗಳಲ್ಲಿ ಯಾರ ಮನೆಯಲ್ಲಾದರೂ ಮದುವೆ ನಡೆದರೆ ಇಡೀ ಊರಿಗೆ ಊರೇ ನೆರೆದಿರುತ್ತಿತ್ತು. ಸೌದೆ ಒಡೆಯುವುದರಿಂದ ಮೊದಲುಗೊಂಡು, ಚಪ್ಪರ ಹಾಕುವುದು, ಅಡುಗೆ ಮಾಡುವುದು, ಬಡಿಸುವುದು ಎಲ್ಲವನ್ನೂ ಊರಿನ ಜನರೇ ಮಾಡುತ್ತಿದ್ದರು. ಪಂಕ್ತಿಯಲ್ಲಿ ಕೂತು ಬೂಂದಿ ಪಾಯಸ ಸವಿಯುತ್ತಿದ್ದ ದಿನಗಳು ನನಗೆ ಇನ್ನೂ ನೆನಪಿವೆ ಎಂದು ಅವರು ಹೇಳಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.