ಮಂಡ್ಯ: ಮಂಡ್ಯದ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೆ ಮತ್ತು ಕೈಸನ್ನೆ ಮೂಲಕ ಹಣದ ಆಮೀಷ ಒಡ್ಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಮಂಡ್ಯದ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ʼವಾಮಮಾರ್ಗದಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂದು ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯಲ್ಲಿಯೂ ಕಣ್ಸನ್ನೆ ಮತ್ತು ಕೈಸನ್ನೆ ಮೂಲಕ ನಮ್ಮ ಸದಸ್ಯರಿಗೆ ಹಣದ ಆಮೀಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು? ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಇಂದು ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ


ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಲೇಬೇಕಾಯಿತು. ದೆಹಲಿಯಲ್ಲಿ ಸಚಿವ ಸಂಪುಟದ ಸಭೆ ನಿಗದಿಯಾಗಿತ್ತು. ನಾನು ಪ್ರಧಾನಮಂತ್ರಿಗಳ ಕಚೇರಿಯ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಅಷ್ಟರಮಟ್ಟಿಗೆ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು. 


ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್‌ಪರ್ಟ್!


ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ. ಆದರೆ ಏನಾದರೂ ಕಿತಾಪತಿ ಮಾಡುವುದಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ಮಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷರು ವ್ಯಾಪಾರ ಶುರು ಮಾಡಿದ್ದರು. ನಮ್ಮ‌ ಪಕ್ಷದಿಂದ ಗೆದ್ದು ಯಾವ ರೀತಿ ನಡೆದುಕೊಂಡರು ಎನ್ನುವುದು ಗೊತ್ತಿದೆ. ಮಹದೇವು ನಿಷ್ಠಾವಂತ ಜೆಡಿಎಸ್ ಸದಸ್ಯರು. ಪಕ್ಷ ನಿಷ್ಠೆಗೆ ಬೆಲೆ ಕೊಟ್ಟು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿಲ್ಲ. ಕಾಂಗ್ರೆಸ್ ನಾಯಕರು ಇವರ ಕುಟುಂಬದ ಸದಸ್ಯರನ್ನು ಬ್ಲಾಕ್‌ಮೇಲ್ ಮಾಡಿದರು. ಮಹದೇವು ಅವರು ತೆಗೆದುಕೊಂಡ ನಿರ್ಧಾರ ಪಕ್ಷನಿಷ್ಠೆಗೆ ಮಾದರಿಯಾಗಿದೆ ಎಂದು ಇದೇ ವೇಳೆ ಎಚ್‌ಡಿಕೆ ತಿಳಿಸಿದರು. ನಂತರ ಅವರು ನಗರಸಭಾ ಸದಸ್ಯರಾದ ಮಹದೇವು, ರಾಮಲಿಂಗಯ್ಯ ಮತ್ತು ವಿಶಾಲಾಕ್ಷಿ ಅವರ ಮನೆಗಳಿಗೆ ಭೇಟಿ ನೀಡಿದರು.


ಇದನ್ನೂ ಓದಿ:  ನಿನ್ನೆ ರಾತ್ರಿ ಪರಪ್ಪನ ಅಗ್ರಹಾರಕ್ಕೆ DIG ದಿವ್ಯಾ & ಟೀಂ ದಾಳಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.